ತೂಮಿನಾಡು ಕೊಲೆ ಪ್ರಕರಣ: ಆರೋಪಿಯನ್ನು ಕತ್ತಿ ಖರೀದಿಸಿದ ಅಂಗಡಿ, ಮನೆಗೆ ತಂದು ಮಾಹಿತಿ ಸಂಗ್ರಹ; ಮಹಿಳೆಯರಿಂದ ಪ್ರತಿಭಟನೆ
ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜತ್ತೂರಿನಲ್ಲಿ ಪುತ್ರಿ ಹಾಗೂ ಪತ್ನಿಯ ಸಹೋದರಿಯ ಪತಿಯನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಆರೋಪಿ ಉಮ್ಮರ್ ಫಾರೂಕ್ನನ್ನು ಪೊಲೀಸ್ ಕಸ್ಟಡಿಗೆ ಬಿಟ್ಟುಕೊಡಲಾಗಿದ್ದು, ಆತನನ್ನು ಘಟನೆ ನಡೆದ ಸ್ಥಳಕ್ಕೆ ತಂದು ಹೇಳಿಕೆ ಸಂಗ್ರಹ ಪೂರ್ತಿಗೊಂಡಿತು. ಇಂದು ಮಧ್ಯಾಹ್ನ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗುವುದೆಂದು ತನಿಖಾ ಅಧಿಕಾರಿ ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ತಿಳಿಸಿದ್ದಾರೆ. ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯ ಐದು ದಿನಕ್ಕೆ ತನಿಖಾ ಅನ್ವಯ ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ …