ಮಿಂಚಿಪದವು ಕ್ಷೇತ್ರ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಎಡನೀರು ಶ್ರೀಗಳಿಂದ ಉದ್ಘಾಟನೆ

ಮುಳ್ಳೇರಿಯ: ಮಿಂಚಿಪದವು ಶ್ರೀ ಕಾವೇರಿಯಮ್ಮ ಮಹಾಲಿಂಗೇಶ್ವರ ದೇಗುಲದ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದಂಗವಾಗಿ ನಿನ್ನೆ ಸಂಜೆ ನಡೆದ ಧಾರ್ಮಿಕ ಸಭೆಯನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದಾಮೋದರ ಎಂ. ಅಧ್ಯಕ್ಷತೆ ವಹಿಸಿದರು. ಹಿಂದೂ ಐಕ್ಯವೇದಿ ರಾಜ್ಯ ಕಾರ್ಯಾಧ್ಯಕ್ಷ ವಲ್ಸನ್ ತಿಲ್ಲಂಗೇರಿ, ಧಾರ್ಮಿಕ ಚಿಂತಕ ಲಕ್ಷ್ಮೀಶ ಗಬ್ಲಡ್ಕ ಉಪನ್ಯಾಸ ನೀಡಿದರು. ತಲಶ್ಶೇರಿ ಚೀಫ್ ಜ್ಯುಡೀಶ್ಯಲ್ ಮೆಜಿಸ್ಟ್ರೇಟ್ ಕರುಣಾಕರ ಕೆ.ಕೆ.ಪುರ, ಮಾಜಿ ಶಾಸಕ ಬಾಲಕೃಷ್ಣ ಭಟ್ ಕೋಳಿಕ್ಕಜೆ, ಬ್ರಹ್ಮಕಲಶೋತ್ಸವ ಸಮಿತಿ …

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ ಇ. ಅಬ್ದುಲ್ಲ ಕುಂಞಿಗೆ ಗೌರವ ಡಾಕ್ಟರೇಟ್

ಕಾಸರಗೋಡು: ದೆಹಲಿ ಕೇಂದ್ರವಾಗಿ ಕಾರ್ಯಾಚರಿಸುವ ವರ್ಲ್ಡ್ ಕಲ್ಚರಲ್ ಆಂಡ್ ಎಜ್ಯುಕೇಶನಲ್ ಆರ್ಗನೈಸೇಶನ್‌ನ ಗೌರವ ಡಾಕ್ಟರೇಟ್ ಇ. ಅಬ್ದುಲ್ ಕುಂಞಿಯವರಿಗೆ ಲಭಿಸಿದೆ. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಈ ಗೌರವ ಲಭಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಪದವಿ ಪ್ರದಾನ ಮಾಡಿದರು. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಇ. ಅಬ್ದುಲ್ಲ ಕುಂಞಿ ಸಕ್ರಿಯರಾಗಿದ್ದಾರೆ. ಕಾಸರಗೋಡು ಫ್ಯಾಮಿಲಿ ವೆಲ್ಫೇರ್ ಸೊಸೈಟಿ ಅಧ್ಯಕ್ಷನಾಗಿರುವ ಇವರು ರಸ್ತೆ ಅಪಘಾತಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಲು ಹಲವಾರು ಕಾರ್ಯಗಳನ್ನು …