ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಮೃತ್ಯು: ಗುತ್ತಿಗೆದಾರನ ಅಮಾನತು

ಕಲ್ಲಿಕೋಟೆ: ಕಲ್ಲಿಕೋಟೆಯ ವ್ಯಾಪಾರ ಕೇಂದ್ರವಾಗಿರುವ ವಲಿಯಂಗಾಡಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿ ಅದರ ಗುತ್ತಿಗೆದಾರನನ್ನು ಅಮಾನತುಗೊಳಿಸಲಾಗಿದೆ. ಕಲ್ಲಿಕೋಟೆ ಕಾರ್ಪರೇಶನ್‌ನ ಮಾಲಕತ್ವದಲ್ಲಿರುವ 60 ವರ್ಷದಷ್ಟು ಹಳೆಯದಾದ ಕಟ್ಟಡದ ಸನ್‌ಶೇಡ್‌ನ ಸ್ಲ್ಯಾಬ್ ನಿನ್ನೆ ಮಧ್ಯಾಹ್ನ ಕುಸಿದು ಅದರ ಅಡಿಭಾಗದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ದೇಹದ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಇದರಲ್ಲಿ ತಲೆಹೊರೆ ಕಾರ್ಮಿಕ ಕಿರಾಶೇರಿಯ ಪಿ.ಎ. ಅಬ್ದುಲ್ ಜಬ್ಬಾರ್ (60), ಅತ್ತೋಳಿ ನಿವಾಸಿಗಳಾದ ಕುನಿ ಅಶ್ರಫ್ (56), ಬಶೀರ್ (65) …

ನಿರ್ಮಾಣ ಕಾರ್ಮಿಕರ 16 ತಿಂಗಳ ಪಿಂಚಣಿ, ಸೌಲಭ್ಯ ಶೀಘ್ರ ವಿತರಿಸಲು ಸರಕಾರ ಮುಂದಾಗಬೇಕು-ಎಐಟಿಯುಸಿ

ಕಾಸರಗೋಡು: ಕೇರಳದಲ್ಲಿ ಕಾರ್ಮಿಕರ ಹಾಗೂ ಕುಟುಂಬಗಳ ಸಾಮಾಜಿಕ ಸುರಕ್ಷತೆಯನ್ನು ಖಚಿತಪಡಿಸಲು ಜ್ಯಾರಿಗೆ ತರಲಾದ ನಿರ್ಮಾಣ ಕಾರ್ಮಿಕರ ಕ್ಷೇಮ ನಿಧಿ ಮಂಡಳಿಯನ್ನು ಸರಕಾರ ಸಂರಕ್ಷಿಸಬೇಕೆಂದು ಕನ್‌ಸ್ಟ್ರಕ್ಷನ್ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ) ಜಿಲ್ಲಾ  ಸಮ್ಮೇಳನ ಒತ್ತಾಯಿಸಿದೆ. 16 ತಿಂಗಳ ಪಿಂಚಣಿ ವಿತರಣೆಯಾಗಿಲ್ಲ. ಒಂದು ವರ್ಷದಿಂದ ಸೌಲಭ್ಯ, ಅರ್ಜಿಗಳ ಮೇಲೆ ಕ್ರಮ ಕೈಗೊಂಡಿಲ್ಲ. ಕೇರಳ ರಾಜ್ಯೋದಯ ದಿನದಂದು ಮುಖ್ಯಮಂತ್ರಿ ತನ್ನ ಭಾಷಣದಲ್ಲಿ ಈ ಪಿಂಚಣಿ  ವಿತರಣೆಗಾಗಿ 950 ಕೋಟಿ ರೂಪಾಯಿ ಮೀಸಲಿಡುವುದಾಗಿ ತಿಳಿಸಿದ್ದರು. ಅದರ ಮೇಲೆ ಕಾರ್ಮಿಕರು ನಿರೀಕ್ಷೆಯಿರಿಸಿದ್ದಾರೆ. ಆದ್ದರಿಂದ ಪಿಂಚಣಿ …