ಜಿಲ್ಲಾ ಸಹಕಾರಿ ಆಸ್ಪತ್ರೆಗಳಲ್ಲಿ ಇ.ವಿ ಚಾರ್ಜಿಂಗ್ ಸ್ಟೇಶನ್ ಉದ್ಘಾಟನೆಗೆ ಸಜ್ಜು

ಕುಂಬಳೆ: ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘದ ಆಶ್ರಯದಲ್ಲಿ  ಸೌರ ಶಕ್ತಿ ನಿರ್ಮಿತ ಇಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಉದ್ಘಾಟನೆಗೆ ಸಿದ್ಧವಾಗಿದೆ. ಜಿಲ್ಲೆಯಲ್ಲಿ ಸಹಕಾರಿ ವಲಯದಲ್ಲಿ ಚಾರ್ಜಿಂಗ್ ಸ್ಟೇಶನ್ ಇದೇ ಪ್ರಥಮವಾಗಿದ್ದು,  ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘದ ಅಧೀನದಲ್ಲಿರುವ ಕುಂಬಳೆ, ಚೆಂಗಳ, ಮುಳ್ಳೇರಿಯ ಎಂಬ ಮೂರು ಆಸ್ಪತ್ರೆಗಳಲ್ಲೂ ಸೋಲಾರ್ ಇಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಸ್ಥಾಪಿಸಲಾಗಿದೆ. ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ  35 ಕೆಡಬ್ಲ್ಯುಪಿ ವೇಗದ, 37 ಕೆಡಬ್ಲ್ಯುಡಿಸಿ ಚಾರ್ಜಿಂಗ್ ಯಂತ್ರಗಳಿದ್ದು, ಚೆಂಗಳದ ಆಸ್ಪತ್ರೆಯಲ್ಲಿ 115 ಕೆಡಬ್ಲ್ಯುಪಿ, 67 ಕೆಡಬ್ಲ್ಯುಡಿಸಿ …

ಪಡಿಪ್ಪರೆ ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

ಬದಿಯಡ್ಕ: ಕುಂಬಳೆ ಮುಳ್ಳೇ ರಿಯ ಕೆಎಸ್‌ಟಿಪಿ ರಸ್ತೆಯ ಬದಿ ಯಡ್ಕ-ನೀರ್ಚಾಲು ಸಮೀಪದ ಪಡಿಪ್ಪರೆ ಎಂಬಲ್ಲಿ ರಸ್ತೆಗೆ ವಾಲಿ ಕೊಂಡಿರುವ ತೆಂಗಿನಮರವೊAದು ಅಪಾಯಕಾರಿಯಾಗಿ ಪರಿಣಮಿಸಿದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿ ಸಲಾಯಿತು.ಬದಿಯಡ್ಕ ಪಂ. ನೀರ್ಚಾಲು ವಾರ್ಡು ವ್ಯಾಪ್ತಿಯ ಕನ್ನೆಪ್ಪಾಡಿ ಪಡಿಪ್ಪರೆ ಎಂಬಲ್ಲಿ ರಸ್ತೆಯ ಬದಿ ತೆಂಗಿನ ಮರವೊಂದು ರಸ್ತೆಗೆ ವಾಲಿಕೊಂಡಿತ್ತು. ತಿರುವಿನ ಸ್ಥಳವಾಗಿರುವುದರಿಂದ ವಾಹನಗಳು ಸಂಚರಿಸುವ ವೇಳೆ ಈ ತೆಂಗಿನ ಮರ ವಾಹನಗಳಿಗೆ ತಾಗಿ ಕೊಳ್ಳುತ್ತಿತ್ತು. ಅದನ್ನು ತಪ್ಪಿಸುವುದಕ್ಕಾಗಿ ವಾಹನ ಚಾಲಕರು ಬಲಭಾಗದಲ್ಲಿ ಸಂಚರಿಸುತ್ತಿದ್ದರು. ಅದರಿಂದಾಗಿ ಎದುರಿನಿಂದ ಬರುವ ವಾಹನಕ್ಕೆ …

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟೋರಸ್ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ; ಒಂದೂವರೆ ಗಂಟೆ ಕಾರ್ಯಾಚರಣೆ ಮೂಲಕ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಕ್ಲೀನರ್‌ನನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾಸರಗೋಡು: ನಗರದ ಕರಂದಕ್ಕಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ  ಟೋರಸ್ ಲಾರಿಯ ಹಿಂಬದಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ಒಂದೂವರೆ ಗಂಟೆ ಕಾಲ ಕ್ಯಾಬಿನ್‌ನಲ್ಲಿ ಸಿಲುಕಿದ ಲಾರಿ ಕ್ಲೀನರ್‌ನನ್ನು ಅಗ್ನಿಶಾಮಕದಳ ಹಾಗೂ ನಾಗರಿಕರು ಸೇರಿ ಸಾಹಸಿಕ ವಾಗಿ ರಕ್ಷಿಸಿದ್ದಾರೆ. ಪಶ್ಚಿಮಬಂಗಾಲ ನಿವಾಸಿಯಾದ ಸ್ವರೂಪ್ ಮೋದಿ (೨೮) ಎಂಬವರನ್ನು ರಕ್ಷಿಸಲಾಗಿದೆ. ನಿನ್ನೆ ರಾತ್ರಿ ೧೨ ಗಂಟೆ ವೇಳೆ ಅಗ್ನಿಶಾಮಕದಳ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟೋರಸ್ ಲಾರಿಯ …