ವಾಹನ ಅಪಘಾತ: ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು

ಉಪ್ಪಳ: ಸೋಂಕಾಲಿನಲ್ಲಿ ಮೊನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ  ಮೃತಪಟ್ಟರ. ಪಾಲಕ್ಕಾಡ್ ನಿವಾಸಿಯೂ ಉಪ್ಪಳ ಸೋಂಕಾಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ  ಅನ್ಸಲ್ (37) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಅಲ್ಯುಮಿನಿಯಂ ಫ್ಯಾಬ್ರಿಕೇ ಶನ್ ಕೆಲಸ ನಿರ್ವಹಿಸುತ್ತಿದ್ದರು. ಮೊನ್ನೆ ಮಧ್ಯಾಹ್ನ ವಾಸಸ್ಥಳದಿಂದ ಆಹಾರ ಸೇವಿಸಿ ಸೋಂಕಾ ಲ್‌ನ ಕೆಲಸದ ಸ್ಥಳಕ್ಕೆ ತೆರಳುತ್ತಿದ್ದ ವೇಳೆ  ಅನ್ಸಲ್ ಚಲಾಯಿಸುತ್ತಿದ್ದ  ಬೈಕ್‌ಗೆ ಕಾರು ಢಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಂಭೀರ ಗಾಯ ಗೊಂಡ ಅನ್ಸಲ್‌ರನ್ನು ನಾಗರಿಕರು …