ಕೆ.ಜಿ. ಮಾರಾರ್ ಸ್ಮೃತಿ ದಿನಾಚರಣೆ

ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಕೇಂದ್ರವಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ದಿ| ಕೆ.ಜಿ. ಮಾರಾರ್ ಸ್ಮೃತಿ ದಿನ ಆಚರಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಪಿ.ಆರ್. ಸುನಿಲ್, ಎನ್. ಬಾಬುರಾಜ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ  ವೀಣಾ ಅರುಣ್ ಶೆಟ್ಟಿ, ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಶೈನಿ, ಮಹಿಳಾ ಮೋರ್ಛಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯಕ್  ಸಹಿತ …

ಕಯ್ಯಾರು ಪೊನ್ನೆತ್ತೋಡು ಮಹಿಳಾ ಯಕ್ಷಕೂಟ,ಬಾಲಕಲಾವಿದರ ಯಕ್ಷಕಲಾ ಕೇಂದ್ರದ ವಾರ್ಷಿಕೋತ್ಸವ

ಉಪ್ಪಳ: ಮಹಿಳಾ ಯಕ್ಷಕೂಟ ಹಾಗೂ ಬಾಲಕಲಾವಿದರ ಯಕ್ಷ ಕಲಾ ಕೇಂದ್ರ ಪೊನ್ನೆತ್ತೋಡು ಕಯ್ಯಾರು, ಈ ಎರಡೂ ತರಬೇತಿ ಕೇಂದ್ರದ 11ನೇ ವಾರ್ಷಿಕೋತ್ಸವ ಮೇ 2 ಹಾಗೂ 3ರಂದು ಶ್ರೀ ಭಗವತಿ ಕೃಪಾ ವೀರಾಂಜನೇಯ ವ್ಯಾಯಾಮ ಶಾಲೆ, ಭಗವತೀ ನಗರ ಅಡ್ಕದಲ್ಲಿ ಜರಗಲಿದೆ. ೨ರಂದು ಬೆಳಿಗ್ಗೆ 10 ಗಂಟೆಗೆ ವಾರ್ಷಿಕೋತ್ಸವದ ಉದ್ಘಾಟನೆ,11 ರಿಂದ ಮಹಿಳಾ ಯಕ್ಷಕೂಟದ ಸದಸ್ಯರಿಂದ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳ, 3ಕ್ಕೆ ಪೂರ್ವರಂಗ ವೈಭವ ಹಾಗೂ 5 ಗಂಟೆಯಿದ ಬಾಲ ಕಲಾವಿದರ ಕೇಂದ್ರದ ವಿದ್ಯಾರ್ಥಿಗಳಿಂದ ಕೃಷ್ಣ …

ಪೆರಡಾಲ ಶ್ರೀ ಉದನೇಶ್ವರನ ಮೂಲಕ ಭಕ್ತರು ಒಂದಾಗಿದ್ದಾರೆ-ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ

ಬದಿಯಡ್ಕ: ಜೀರ್ಣೋದ್ಧಾರಗೊಂಡ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನವು ಇಂದು ದೇವಸ್ಥಾನ ಹೇಗಿರಬೇಕೋ ಹಾಗೇ ಬದಲಾಗಿದೆ. ಬಹಳಷ್ಟು ಮಂದಿ ಊರು ಬಿಟ್ಟು ಹೊರಹೋಗಿದ್ದರೂ, ಉದನೇಶ್ವರನ ಮೂಲಕ ಭಕ್ತರು ಒಂದಾಗಿದ್ದಾರೆ. ಉದನೇಶ್ವರನ ಬಿಟ್ಟು ದೂರಹೋಗಿಲ್ಲ. ಜೀವನಕ್ಕೋಸ್ಕರ ಹೊರರಾಜ್ಯದಲ್ಲಿದ್ದರೂ ಅವರೆಲ್ಲರೂ ಉದನೇಶ್ವರನ ಭಕ್ತರಾಗಿಯೇ ಇದ್ದಾರೆ. ತುಂಬ ಚಂದದ ದೇವಸ್ಥಾನವಾಗಿ ಪೆರಡಾಲ ಬದಲಾಗಿದೆ. ಪೆರಡಾಲದ ಬ್ರಹ್ಮಕಲಶೋತ್ಸವದ ಬಗ್ಗೆ ಎಲ್ಲರ ಬಾಯಲ್ಲೂ ಅದ್ಭುತ ಅದ್ಭುತ ಎಂಬ ಮಾತು ಕೇಳಿಬರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನುಡಿದರು.ಪೆರಡಾಲ ಶ್ರೀ ಉದನೇಶ್ವರ …