ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತ ನಿಧನ

ಮಂಗಲ್ಪಾಡಿ: ಆರ್.ಎಸ್.ಎಸ್, ಬಿಜೆಪಿ ಹಿರಿಯ ಕಾರ್ಯಕರ್ತ, ಪ್ರತಾಪನಗರ ನಿವಾಸಿ ಎಂ.ಇ ಗಂಗಾಧರ ಆಚಾರ್ಯ ((65) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮರದ ಕೆಲಸಗಾರರಾಗಿದ್ದರು. ಬಿ.ಎಂ.ಎಸ್ ನಿರ್ಮಾಣ ಔ್ತೆ್ನ%ಔ್ಣ ್ಚ್ಣಒಙ್ಣಟವ್ರಿ¾್ಣ್ನ ಮಾಜಿ ಜಿಲ್ಲಾ ಉಪಾಧ್ಯಾಕ್ಷರು, ಶ್ರೀ ಗಾಯತ್ರಿ ವಿಶ್ವಕರ್ಮ ಸಮಾಜ ಸಭಾ ಪ್ರತಾಪನಗರ ಮಂಗಲ್ಪಾಡಿ ಇದರ ಮಾಜಿ ಅಧ್ಯಕ್ಷರಾಗಿದ್ದರು. ದಿ| ಈಶ್ವರ ಆಚಾರ್ಯ- ದಿ| ಪದ್ಮಾವತಿ ದಂಪತಿ ಪುತ್ರರಾಗಿದ್ದಾರೆ. ಮೃತರು ಪತ್ನಿ ಕಲಾವತಿ, ಮಕ್ಕಳಾದ ಯಶಸ್ವಿನಿ, ಕೀರ್ತಿಶ್ರೀ, ಮಿಥುನ್ ಆಚಾರ್ಯ, ಸಹೋದರ-ಸಹೋದರಿಯರಾದ ಜನಾರ್ದನ ಆಚಾರ್ಯ, ಮಾಧವ ಆಚಾರ್ಯ, …

ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ರಸ್ತೆ  ಹದಗೆಟ್ಟು ಶೋಚನೀಯ: ಸಂಚಾರ ದುಸ್ತರ

ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ರಸ್ತೆ ಸಂಚಾರಕ್ಕೆ ಅಯೋಗ್ಯಗೊಂಡಿರುವುದಾಗಿ ವಾಹನಚಾಲಕರು ದೂರಿದ್ದಾರೆ. ರೈಲ್ವೇ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯ 150 ಮೀಟರ್‌ನಷ್ಟು ಭಾಗದಲ್ಲಿ ಹಲವಾರು ವರ್ಷಗಳಿಂದ ದುರಸ್ತಿಗೊಳಿಸದೆ ಇರುವುದರಿಂದಾಗಿ ಹೊಂಡಗಳಿಂದ ಕೂಡಿ ಸಂಚಾರ ದುಸ್ತರವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ರೈಲ್ವೇ ನಿಲ್ದಾಣಕ್ಕೆ ತಲುಪುವರು, ಈ ಭಾಗದಲ್ಲಿ ವಾಸಿಸುವ ನೂರಾರು ಕುಟುಂಬಗಳು ಉಪ್ಪಳ ಪೇಟೆ ಸಹಿತ ವಿವಿಧ ಕಡೆಗಳಿಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸುತ್ತಿದ್ದಾರೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದರಿಂದಾಗಿ ಬೃಹತ್ ಹೊಂಡಗಳು ಸೃಷ್ಟಿಯಾಗಿವೆ. …

ಪೆಟ್ರೋಲಿಯಂ, ಗ್ಯಾಸ್ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಹೆಚ್ಚಳ ಕೂಡಲೇ ಜ್ಯಾರಿಗೊಳಿಸಲು ಬಿಎಂಎಸ್ ಆಗ್ರಹ

ಕಾಸರಗೋಡು: ಭಾರತೀಯ ಮಜ್ದೂರು ಸಂಘದ ಪೋಷಕ ಸಂಘಟನೆಯಾದ ಪೆಟ್ರೋಲಿಯಂ ಆಂಡ್ ಗ್ಯಾಸ್ ಮಜ್ದೂರ್ ಸಂಘ್ ಜಿಲ್ಲಾ ಸಮ್ಮೇಳನದಲ್ಲಿ ಕಾರ್ಮಿಕರಿಗೆ ವೇತನ ಹೆಚ್ಚಳ ಕೂಡಲೇ ಜ್ಯಾರಿಗೊಳಿಸಬೇಕೆಂದು ಬೇಡಿಕೆ ಒಡ್ಡಲಾಯಿತು. ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರನ್ ಬಂಗಳೋತ್ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಪೆಟ್ರೋಲಿಯಂ, ಗ್ಯಾಸ್ ವಲಯದ ಲಾರಿ ಕಾರ್ಮಿಕರಿಗಾಗಿ ಪ್ರಸ್ತುತ ಇರುವ ಒಪ್ಪಂದ ಪ್ರಕಾರದ ವೇತನ ಕಾಸರಗೋಡು ಜಿಲ್ಲೆಯಲ್ಲಿ ಲಭ್ಯಗೊಳಿಸಲಾಗುತ್ತಿಲ್ಲವೆಂದು ಆರೋಪಿಸಿದರು. ಒಪ್ಪಂದ ಪ್ರಕಾರವಿರುವ ವೇತನ ಹಾಗೂ ಇತರ ಸೌಲಭ್ಯಗಳನ್ನು ಕಾರ್ಮಿಕರಿಗೆ ಶೀಘ್ರವೇ ಲಭ್ಯಗೊಳಿಸಬೇಕೆಂದು ಅವರು ಆಗ್ರಹಿಸಿದರು. ಕಂಪೆನಿಗಳು …