ಮಂಜೇಶ್ವರ ತಾಲೂಕು ಲೈಬ್ರರಿ  ಕೌನ್ಸಿಲ್ ತಾಲೂಕು ಸಂಗಮ ನಾಳೆ

ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ತಾಲೂಕು ಸಂಗಮ ನಾಳೆ ಬೆಳಿಗ್ಗೆ ೧೦ಕ್ಕೆ ಕುಂಬಳೆ ಜಿಎಸ್‌ಬಿಎಸ್ ಯುಪಿ ಶಾಲೆಯಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಡಾ. ಪಿ. ಪ್ರಭಾಕರನ್ ಉದ್ಘಾಟಿಸುವರು. ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಕೆ. ಅಧ್ಯಕ್ಷತೆ ವಹಿಸುವರು. ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯಕಾರಿ ಸಮಿತಿ ಸದಸ್ಯ ರಾಮಚಂದ್ರ ಎಂ. ಶ್ರದ್ಧಾಂಜಲಿ ಠರಾವು ಮಂಡಿಸುವರು. ಉಪಜಿಲ್ಲಾ ವಿದ್ಯಾಧಿಕಾರಿ ಜೋರ್ಜ್ ಕ್ರಾಸ್ತ ಸಿ.ಎಚ್. ಮುಖ್ಯ ಅತಿಥಿಯಾಗಿರುವರು. ತಾಲೂಕು ಲೈಬ್ರರಿ ಕೌನ್ಸಿಲ್‌ನ ಕಾರ್ಯಕಾರಿ ಸಮಿತಿಗೆ …

ಮಹಿಳೆಯರಿಗೆ, ಮಕ್ಕಳಿಗೆ ಮಾತ್ರವಾಗಿ ಪ್ರತ್ಯೇಕ ಘಟಕ, ಅತ್ಯಾಧುನಿಕ ಪಿಡಿಯಾಟ್ರಿಕ್ ಐಸಿಯು ಕಣ್ಣೂರು ಬೇಬಿ ಮೆಮೋರಿಯಲ್ ಹಾಸ್ಪಿಟಲ್‌ನಲ್ಲಿ ಉದ್ಘಾಟನೆ

ಕಣ್ಣೂರು: ಕಣ್ಣೂರು ಬೇಬಿ ಮೆಮೋರಿಯಲ್ ಹಾಸ್ಟಿಟಲ್‌ನಲ್ಲಿ ಮಹಿಳೆಯರಿಗೂ, ಮಕ್ಕಳಿಗೂ ಹೆಚ್ಚು ಸೌಕರ್ಯಪ್ರದವಾದ ಹಾಗೂ ಸಮಗ್ರ ಪರಿಚರಣೆ ಖಚಿತಪಡಿಸುವ ಹೊಸ ಸೆಂಟರ್ ಫಾರ್ ವುಮೆನ್ ಆಂಡ್ ಚೈಲ್ಡ್ ಅತ್ಯಾಧುನಿಕ ಪಿಡಿಯಾಟ್ರಿಕ್ ಐಸಿಯು ಉದ್ಘಾಟಿಸಲಾಯಿತು. ತಾಯಿಗೆ ಹಾಗೂ ಮಗುವಿಗೆ ಒಂದೇ ಸೂರಿನಡಿಯಲ್ಲಿ ಸಮಗ್ರ ಚಿಕಿತ್ಸೆ ಸೌಕರ್ಯ ಲಭ್ಯಗೊಳಿಸುವ ಈ ಹೊಸ ಕ್ಲಸ್ಟರ್ ವ್ಯವಸ್ಥೆಯ ಆಸ್ಪತ್ರೆಯ ಸೇವಾ ರಂಗದಲ್ಲಿ ನೂತನ ಅಧ್ಯಯವೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಈ ಕೇಂದ್ರದಲ್ಲಿ ಒಬ್‌ಸ್ಟೆಸ್ಟ್ರಿಕ್ಸ್ ಆಂಡ್ ಗೈನೋಕಾಲಜಿ, ನೀಯೋ ನೆಟಾಲೋಜಿ ಪಿಡಿಯಾಟ್ರಿಕ್ಸ್, ಪಿಡಿಯಾಡ್ರಿಕ್ ಕ್ರಿಟಿಕಲ್ ಕೇರ್ ಎಂಬೀ …

ಮಟ್ಟಲಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಿರುಕು : ತನಿಖಾ ತಂಡ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ

ಹೊಸದುರ್ಗ: ಚೆರುವತ್ತೂರು ಮಟ್ಟಲಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣ ರಸ್ತೆಯಲ್ಲಿ ಬಿರುಕು ಪತ್ತೆಯಾದ ಘಟನೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನೇಮಕ ಮಾಡಿದ ಆರ್‌ಡಿಒ ನೇತೃತ್ವದಲ್ಲಿರುವ ತನಿಖಾ ತಂಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಮಳೆಗಾಲದಲ್ಲಿ ದುರಂತ ಹೊರತುಪಡಿಸಲು ಕಠಿಣ ಕ್ರಮಗಳಿಗೆ ಜಿಲ್ಲಾಧಿಕಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದ್ದಾರೆ. ಮುಂದಿನ ಕ್ರಮಗಳಿಗಾಗಿ ವರದಿ ಯನ್ನು ಸರಕಾರಕ್ಕೆ ಸಲ್ಲಿಸಲಾಗು ವುದು. ಹೆದ್ದಾರಿ ಪ್ರಾಧಿಕಾರದೊಂದಿಗೆ ಸೇರಿಕೊಂಡು ಮುಂದಿನ ನಿರ್ಮಾಣ ಚಟುವಟಿಕೆಗಳನ್ನು ನಿರೀಕ್ಷಿಸುವುದಕ್ಕೆ ಕಾಞಂಗಾಡ್ ಆರ್‌ಡಿಒರಿಗೆ ಜಿಲ್ಲಾಧಿಕಾರಿ ಹೊಣೆ ನೀಡಿದರು. ನಿರ್ಮಾಣದಲ್ಲಿನ ಲೋಪದೋಷಗಳನ್ನು …

ಹೊಸಂಗಡಿ ರೈಲ್ವೇ ಗೇಟ್‌ನಲ್ಲಿ ವಾಹನಗಳ ದಟ್ಟಣೆ: ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ

ಮಂಜೇಶ್ವರ: ಹೊಸಂಗಡಿ ರೈಲ್ವೇಗೇಟ್ ಮುಚ್ಚಿದ ಬಳಿಕ ತೆರೆಯಲು ವಿಳಂಬಗೊಳ್ಳುತ್ತಿ ರುವುದು ವಾಹನ ಸಂಚಾರಕ್ಕೆ ಅಡಚಣೆಗೆ ಕಾರಣವಾಗುತ್ತಿದೆ. ವಾಹನಗಳ ಸರದಿ ಸಾಲು ಹೆದ್ದಾರಿಗೆ ತಲುಪುತ್ತಿರುವುದ ರಿಂದ ಇತರ ವಾಹನ ಸಂಚಾ ರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರು ಒತ್ತಾಯಿಸಿ ದ್ದಾರೆ. ಗೇಟ್ ಮುಚ್ಚಿದ ಬಳಿಕ ತೆರೆಯಲು ಸುಮಾರು 20ನಿಮಿಷಗಳ ಕಾಲ ಬೆೆÃಕಾಗುತ್ತಿದೆ. ಇದರಿಂದ ಹೊಸಂಗಡಿ ಪೇಟೆಯಿಂದ ಬಂಗ್ರಮAಜೇಶ್ವರ ಭಾಗಗಳಿಗೆ ತೆರಳಬೇಕಾದ ವಾಹನಗಳ ಸಾಲು ಹೆದ್ದಾರಿ ತನಕ ತಲುಪುತ್ತಿದೆ.ಇದು ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಹೆದ್ದಾರಿ ಅಭಿವೃದ್ದಿಯಿಂದ ರೈಲ್ವೇ …