ಮಾರ್ಪನಡ್ಕದಲ್ಲಿ ಬ್ಯಾಂಕ್ ಸೆಕ್ಯೂರಿಟಿ ನೌಕರನನ್ನು ಇರಿದು ಕೊಲೆಗೈದ ಇಬ್ಬರು ಆರೋಪಿಗಳ ಬಂಧನ: ಕೊಲೆಗೆ ಬಳಸಿದ ಚಾಕು ಪತ್ತೆಗಾಗಿ ಪೊಲೀಸರು ಪುತ್ತೂರಿಗೆ
ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ನೌಕರನೂ, ಮಾರ್ಪನಡ್ಕ ಬೆದ್ರಕೂಡ್ಲು ನಿವಾಸಿಯಾದ ಸುರೇಶ್ (42) ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬ್ಡಾಜೆ ಮೈಲ್ತೊಟ್ಟಿಯ ಕಿರಣ್ (30), ಕರುವತ್ತಡ್ಕದ ಅಖಿಲೇಶ್ (25) ಎಂಬಿವರನ್ನು ಕಾಸರಗೋಡು ಎಎಸ್ಪಿ ಅಚ್ಯುತ್ ಅಶೋಕ್, ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ಕೃಷ್ಣನ್ ಎಂಬಿವರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಕೊಲೆ ಕೃತ್ಯದಬಳಿಕ ಆರೋಪಿಗಳು ಕರ್ನಾಟಕಕ್ಕೆ ಪರಾರಿಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಇದರಿಂದ ಕೂಡಲೇ ಪೊಲೀಸರು ಕಾರ್ಯಾಚರಣೆ …