ಅನಂತಪುರ ಕೈಗಾರಿಕಾ ಕೇಂದ್ರ ಪರಿಸರ ಮಲಿನೀಕರಣಕ್ಕೆ ತುರ್ತು ಪರಿಹಾರ ಉಂಟಾಗಬೇಕು- ಬಿಜೆಪಿ

ಕುಂಬಳೆ: ಅನಂತಪುರ ಇಂಡಸ್ಟ್ರಿಯಲ್ ಏರಿಯ ಪರಿಸರದ ಮಲಿನೀಕರಣ, ದುರ್ವಾಸನೆಗೆ ತುರ್ತು ಪರಿಹಾರ ಉಂಟಾಗಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆಗ್ರಹಿಸಿದ್ದಾರೆ. ಬಿಜೆಪಿ ಮುಖಂಡರು ಹಾಗೂ ಸ್ಥಳೀಯರ ಜೊತೆ ಕೈಗಾರಿಕಾ ಪ್ರಾಂಗಣದ ವಿವಿಧ ಸಂಸ್ಥೆಗಳನ್ನು ಸಂದರ್ಶಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಕೈಗಾರಿಕೀಕರಣ ಜನರ ಆರ್ಥಿಕ ಪ್ರಗತಿಗೆ ಅನಿವಾರ್ಯವಾಗಿದೆ. ಆದರೆ ಜನರ ಆರೋಗ್ಯಕ್ಕೆ ಹಾನಿ ಉಂಟಾಗುವ, ಜಲಮೂಲಗಳು, ವಾತಾವರಣ ಮಲೀನಗೊಳ್ಳುವಂತಹ ಕೈಗಾರಿಕೆಗಳನ್ನು ತೊರೆಯಲು ಕೈಗಾರಿಕಾ ಇಲಾಖೆ ಸಿದ್ಧವಾಗಬೇಕು ಎಂದು ಅವರು ಆಗ್ರಹಿಸಿದರು. ಕಾರ್ಯದರ್ಶಿ ಪಿ.ಆರ್. ಸುನಿಲ್, ಮಂಡಲ ಅಧ್ಯಕ್ಷ ಸುನಿಲ್ …

ಹೊಸಂಗಡಿ ರೈಲ್ವೇ ಗೇಟ್ ಬಳಿ ರಸ್ತೆಯಲ್ಲಿ  ಮಳೆನೀರು ಸಂಗ್ರಹ: ಪಾದಚಾರಿಗಳಿಗೆ ಸಮಸ್ಯೆ

ಮಂಜೇಶ್ವರ: ಹೊಸಂಗಡಿ ರೈಲ್ವೇ ಗೇಟ್‌ಗೆ ಹೊಂದಿಕೊA ಡಿರುವ ರಸ್ತೆಯನ್ನು ನವೀಕರಣ ಗೊಳಿಸಿ ಅಭಿವೃದ್ದಿಪಡಿಸಲಾಗಿದೆ. ಆದರೆ ಈ ರಸ್ತೆಯಲ್ಲಿ ಮಳೆ ನೀರು ಕಟ್ಟು ನಿಲ್ಲುವುದು ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದಾಗಿ ದೂರಲಾಗಿದೆ. ಎರಡು ವರ್ಷದ ಹಿಂದೆ ಇಂಟರ್‌ಲಾಕ್ ಅಳವಡಿಸಿ ರಸ್ತೆಯನ್ನು ದುರಸ್ತಿಗೊಳಿಸಲಾಗಿದೆ. ಆದರೆ ಸಮತಟ್ಟು ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿ ಸಂಗ್ರಹಗೊAಡು ವಾಹನ ಸಂಚಾರದ ವೇಳೆ ನಡೆದು ಹೋಗುವರ ಮೇಲೆ ಕೆಸರು ನೀರು ಎರಚುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಗೇಟ್ ಹಾಕಿದ ವೇಳೆ ವಾಹನಗಳು ನೀರಿನಲ್ಲಿ ನಿಲ್ಲಬೇಕಾಗುತ್ತಿದೆ. ಕಳಪೆ ಕಾಮಗಾರಿ ಕಾರಣವೆಂದು …