ಕಟ್ಟಿ ಹಾಕಿದ ಸಾಕುನಾಯಿ ಅಜ್ಞಾತ ಪ್ರಾಣಿ ದಾಳಿಗೆ ಬಲಿ : ಚಿರತೆ ಕೊಂದಿರಬಹುದೆಂಬ ಶಂಕೆ; ಬೆಳ್ಳೂರಿನಲ್ಲಿ ಭೀತಿ ಸೃಷ್ಟಿ
ಬೆಳ್ಳೂರು: ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಅಜ್ಞಾತ ಪ್ರಾಣಿ ಕಚ್ಚಿ ಕೊಂದು ಹಾಕಿದ ಘಟನೆ ನಡೆದಿದೆ. ನಾಟೆಕಲ್ಲು ಬಳಿಯ ಜಾಲಮೂಲೆ ಎಂಬಲ್ಲಿನ ಲೀಲಾ ಎಂಬವರ ಸಾಕು ನಾಯಿ ಸಾವಿಗೀಡಾಗಿದೆ. ನಾಯಿಯನ್ನು ಕೊಂದು ಅರೆಬರೆ ಮಾಂಸವನ್ನು ತಿಂದ ಸ್ಥಿತಿಯಲ್ಲಿ ಕಂಡು ಬಂದಿದೆ. ಇಂದು ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ನಾಯಿ ಸಾವಿಗೀಡಾಗಿರುವುದು ಕಂಡು ಬಂದಿದೆ. ನಾಯಿಯ ದೇಹದಲ್ಲಿ ಅಜ್ಞಾತ ಪ್ರಾಣಿಯ ಕಡಿತದಿಂದ ಉಂಟಾದ ಗಾಯ ಕಂಡು ಬಂದಿದೆ. ಈ ಬಗ್ಗೆ ಮನೆಯವರು ನೀಡಿದ ಮಾಹಿತಿಯಂತೆ ಅರಣ್ಯಾಧಿಕಾರಿಗಳು …