ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿ ಇಲಿವಿಷ ಸೇವಿಸಿ ಮೃತ್ಯು

ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ ಅಭಿಲಾಷ್ (31) ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ. ಮೂರು ದಿನಗಳ ಹಿಂದೆ  ಈತ  ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅರೆಪ್ರಜ್ಞಾ ವಸ್ಥೆಯಲ್ಲಿ ಪತ್ತೆಯಾಗಿ ದ್ದನು.ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪೊಲೀಸರು  ಅಭಿಲಾಷ್‌ನನ್ನು  ಮೊದಲು ಕಾಸರಗೋಡಿನ ಆಸ್ಪತ್ರೆಗೆ ತಲುಪಿಸಿದ್ದರು. ಬಳಿಕ ಸ್ಥಿತಿ ಗಂಭೀರ …

ಮಾದಕವಸ್ತು ಪ್ರಕರಣ ತಲೆಮರೆಸಿದ್ದ ಉಪ್ಪಳ ನಿವಾಸಿ ಸೆರೆ

ಉಪ್ಪಳ: ಮಾದಕವಸ್ತು ಪ್ರಕರಣದಲ್ಲಿ ಸೆರೆಗೀಡಾದ ಬಳಿಕ ಜಾಮೀನು ಪಡೆದು ಬಿಡುಗಡೆ ಗೊಂಡು ತಲೆಮರೆಸಿಕೊಂಡಿದ್ದ ಉಪ್ಪಳ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪಚ್ಲಂಪಾರೆಯ ಫಸಲ್ (31) ಸೆರೆಗೀಡಾದ ಆರೋಪಿ. 2021ರಲ್ಲಿ ಉಳ್ಳಾಲ ಪೊಲೀಸರು ಈತನನ್ನು ಮಾದಕವಸ್ತು ಪ್ರಕರಣದಲ್ಲಿ ಬಂಧಿಸಿದ್ದರು. ಅನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಈತ ನ್ಯಾಯಾಲಯದಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತ ಉಪ್ಪಳದ ಮನೆಗೆ ತಲುಪಿರುವ ವಿಷಯ ತಿಳಿದು ಉಳ್ಳಾಲ ಪೊಲೀಸರು ಅಲ್ಲಿಗೆ ದಾಳಿ ನಡೆಸಿ ಬಂಧಿಸಿದ್ದಾರೆ.  ಆರೋಪಿಯನ್ನು ಮಂಗಳೂರು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ಈ …

ನಗರದ ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯಗಳಿಂದ ದುರ್ನಾತ: ನಾಗರಿಕರಿಗೆ ಸಮಸ್ಯೆ

ಕಾಸರಗೋಡು:  ನಗರದ ಕರಂದಕ್ಕಾಡು ಜಂಕ್ಷನ್‌ನ ಅಂಡರ್‌ಪಾಸ್‌ನಲ್ಲಿ  ಭಾರೀ ಪ್ರಮಾಣದಲ್ಲಿ ತ್ಯಾಜ್ಯ ತುಂಬಿ ಕೊಂಡಿದ್ದು, ಇದರಿಂದ ಸ್ಥಳೀಯರಿಗೆ ಹಾಗೂ ವಾಹನ ಪ್ರಯಾಣಿಕರಿಗೆ ದುರ್ನಾತ ಬೀರತೊಡಗಿದೆ. ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ಸಂಚರಿಸುವ  ಕೆಲವು ಮಂದಿ ಆಹಾರ ತ್ಯಾಜ್ಯಗಳ ಸಹಿತ  ವಿವಿಧ ಉಪಯೋಗ ಶೂನ್ಯವಸ್ತುಗಳನ್ನು ಇಲ್ಲಿ ಎಸೆಯುತ್ತಿದ್ದಾರೆ. ಮಾತ್ರವಲ್ಲದೆ  ರಸ್ತೆ ಬದಿ ವಾಹನ ನಿಲ್ಲಿಸಿ ಮದ್ಯ ಸೇವಿಸಿ ತಿಂದುಳಿದ ಆಹಾರ ಹಾಗೂ ಬಾಟಲಿಗಳನ್ನು ಇಲ್ಲಿ ಎಸೆಯುತ್ತಿರುವುದಾಗಿ ದೂರಲಾಗಿದೆ. ತ್ಯಾಜ್ಯದ ದುರ್ನಾತದಿಂದ ಪರಿಸರ ನಿವಾಸಿಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ.  ಕೋಟ್ಯಂತರ ರೂಪಾಯಿ …

ನೀಟ್ ಪರೀಕ್ಷೆ: ಅಂಚೆಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ನೀಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರ ಹಾಗೂ ಅದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೈಯ್ಯಬೇಕಾಗಿ ಬಂದಿರುವುದನ್ನು ಪ್ರತಿಭಟಿಸಿ ಎಸ್‌ಎಫ್‌ಐಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಪ್ರಧಾನ ಅಂಚೆ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದುದಕ್ಕೆ ಸಂಬಂಧಿಸಿ ಕಾಸರಗೋಡು ಪೊಲೀಸರು ೨೦ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ರಸ್ತೆ ತಡೆ, ಸಾರ್ವಜನಿಕರಿಗೆ ಹಾಗೂ ಸಾರಿಗೆ ಸಂಚಾರಕ್ಕೆ ಅಡಚಣೆ ಸೃಷ್ಟಿಸಿದ ಆರೋಪದಂತೆ ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಎಸ್‌ಎಫ್‌ಐ ಜಿಲ್ಲಾ ಕಾರ್ಯ …

ಇಲಿವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ಇಲಿವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಳು. ಚೆರ್ವತ್ತೂರು ಕೈದಕ್ಕಾಡ್ ಪಯ್ಯಂಗಿ  ಬಿಸ್ಮಿಲ್ಲ ರಸ್ತೆಯ ನಿವಾಸಿ ಅಬ್ದುಲ್ ರಹ್ಮಾನ್‌ರ ಪುತ್ರಿ ಮುಬಶಿರ (19) ಮೃತಪಟ್ಟ ವಿದ್ಯಾರ್ಥಿನಿ. ಈ ತಿಂಗಳ 2ರಂದು ಮನೆಯಲ್ಲಿ ಈಕೆ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಧ ನಿಧನ ಸಂಭವಿಸಿದೆ.  ಕೈದಕ್ಕಾಡ್ ಅಲ್‌ವರ್ದ ವುಮನ್ಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು.  ಮೃತಳು ತಾಯಿ ಯು.ಎಂ. ಫಾತಿಮ,ಸಹೋದರರಾದ ಫಾಯಿಸ, ರಾಶಿದ, ಸಲ್ಮಾನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾಳೆ.

ಟೈಲರ್ ನಿಧನ

ಉಪ್ಪಳ: ಕೊಂಡೆವೂರು ನಿವಾಸಿಯೂ ಇದೀಗ ಮಂಗಳೂರು ಪಂಪ್‌ವೆಲ್‌ನ ಫ್ಲಾಟ್‌ನಲ್ಲಿ ವಾಸವಾಗಿರುವ ರಾಜೇಂದ್ರ (48) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಈ ಹಿಂದೆ ಹಲವು ವರ್ಷಗಳ ಕಾಲ ಉಪ್ಪಳದಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು. ಆರ್.ಎಸ್.ಎಸ್‌ನ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ ಸುಪ್ರೀತ, ಪುತ್ರ ಲಕ್ಷನ್, ಸಹೋದರಿಯರಾದ ಜಯಂತಿ, ಲಲಿತ, ಗೀತಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಂದೆ, ತಾಯಿ, ಸಹೋದರರಾದ ಭಗವನ್, ಉಮಾನಾಥ ಈ ಹಿಂದೆ ನಿಧನ ಹೊಂದಿದ್ದಾರೆ.

ಎಪ್ಲಸ್ ಪಡೆದ ವಿದ್ಯಾರ್ಥಿನಿಗೆ ಬಿಜೆಪಿಯಿಂದ ಅಭಿನಂದನೆ

ಬದಿಯಡ್ಕ: ಪೆರಡಾಲ ಹದಿಮೂರನೇ ವಾರ್ಡ್ ಬಿಜೆಪಿ ಸಮಿತಿಯ ವತಿಯಿಂದ ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯ ಗಳಲ್ಲಿ ಎ ಪ್ಲಸ್ ಪಡೆದ ಬೀಜಂತಡ್ಕ ಇಳಂತೋಡಿ ಕಿರಣ-ರೇಖ ದಂಪತಿ ಪುತ್ರಿ, ನವಜೀವನ ಹೈಸ್ಕೂಲ್ ವಿದ್ಯಾರ್ಥಿನಿ ರೋಷಿಕಾ ಕಿರಣ್‌ಳನ್ನು ಅಭಿನಂದಿಸಲಾಯಿತು.ವಾರ್ಡ್ ಸಮಿತಿ ಅಧ್ಯಕ್ಷ, ಹಿರಿಯ ಬಿಜೆಪಿ ಕಾರ್ಯಕರ್ತ ಎಂ. ನಾರಾಯಣ ಭಟ್ ಮೈರ್ಕಳ ಹಾಗೂ ಬದಿಯಡ್ಕ ಪಂ, ಉಪಾಧ್ಯಕ್ಷೆ, ಅಶ್ವಿನಿ ಕೆ.ಯಂ. ಜಂಟಿಯಾಗಿ ಗೌರವಿಸಿದರು. ವಾರ್ಡ್ ಸಮಿತಿ ಪ್ರಧಾನ ಕಾರ್ಯ ದರ್ಶಿ ನಾರಾಯಣ ಪಿ ಪೆರಡಾಲ, ಬಾಲಸುಬ್ರಹ್ಮಣ್ಯ ಭಟ್ ಉಪಸ್ಥಿತರಿ …

ಹೊಸಂಗಡಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ತುರ್ತಾಗಿ ನಡೆಸಬೇಕು-ಕೆವಿವಿಇಎಸ್

ಮಂಜೇಶ್ವರ: ಹೊಸಂಗಡಿ ಪೇಟೆಯಿಂದ ಬಂಗ್ರಮಂಜೇಶ್ವರಕ್ಕೆ ಸಂಪರ್ಕ ಕಲ್ಪಿಸುವ  ರೈಲ್ವೇ ಮೇಲ್ಸೇತುವೆ ನಿರ್ಮಾಣ ಹಲವು ವರ್ಷಗಳಿಂದ ಬಾಕಿಯಾಗಿದ್ದು, ಇದು ವಾಹನ ಸಂ ಚಾರಕ್ಕೆ ಅಡಚಣೆಯಾಗಿ ಪರಿಣಮಿಸಿದೆ.  ವಾಹನಗಳ ದಟ್ಟಣೆಯಿಂದ ರಾಷ್ಟ್ರೀಯ ಹೆದ್ದಾರಿ ಮುಚ್ಚುಗಡೆಯಾಗುತ್ತಿದ್ದು, ಇದರ ಪರಿಹಾರಕ್ಕಾಗಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ತುರ್ತಾಗಿ ನಡೆಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಲು ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮಹಾಸಭೆಯಲ್ಲಿ ಠರಾವು ಮಂಡಿಸಲಾಯಿತು. ಸಭೆಯಲ್ಲಿ ಬಶೀರ್ ಕನಿಲ ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷ ಕೆ. ಅಹಮ್ಮದ್ ಶರೀಫ್ ಉದ್ಘಾಟಿಸಿದರು. ಈ ವೇಳೆ ಶಾಸಕ ಎಕೆಎಂ ಅಶ್ರಫ್‌ರನ್ನು …

ಮೀನು ವ್ಯಾಪಾರಿ ನಿಧನ

ಉಪ್ಪಳ: ಉಪ್ಪಳ ಬಳಿಯ ಶಾರದಾನಗರ ನಿವಾಸಿ ಜಗಜೀವನ್‌ರ ಪತ್ನಿ ಶಕುಂತಳ ಸಾಲಿಯಾನ್ (64) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಮಂಜೇಶ್ವರ ದಲ್ಲಿ ಹಲವು ವರ್ಷಗಳ ಕಾಲ ಮೀನು ವ್ಯಾಪಾರಿಯಾಗಿದ್ದರು.ಮೃತರು ಮಕ್ಕಳಾದ ಸತೀಶ, ಸೌಮ್ಯ, ಸುಷ್ಮ, ಸೊಸೆ ಪ್ರತಿಭಾ, ಅಳಿಯಂದಿ ರಾದ ಕಾರ್ತಿಕ್, ಪ್ರಶಾಂತ್, ಸಹೋದರರಾದ ಹರಿಶ್ಚಂದ್ರ, ಕೃಷ್ಣ ಸಾಲಿಯಾನ್, ಚಂದ್ರಹಾಸ, ಸದಾನಂದ, ರಾಜ್ ಕುಮಾರ್ ಸಾಲಿಯಾನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಹೋದರ ರುಕ್ಕಯ್ಯ, ಸಹೋದರಿಯರಾದ ಸುಶೀಲ, ವಸಂತಿ …

ಮಧೂರು ಕ್ಷೇತ್ರದ ನಿವೃತ್ತ ನೌಕರ ನಿಧನ

ಮಧೂರು: ಇಲ್ಲಿನ ಮಣಂಗಳ ನಿವಾಸಿ ಸಿ.ಎಂ. ದಾಮೋದರ ಮಣಿಯಾಣಿ (75) ನಿಧನ ಹೊಂದಿದರು. ಮಧೂರು  ದೇವ ಸ್ಥಾನದ ನಿವೃತ್ತ ನೌಕರನಾಗಿದ್ದಾರೆ. ಮೃತರು ಮಕ್ಕಳಾದ ಮಂಜುಳ, ಮೃದುಲ, ಅಳಿಯ ವಿಜಯನ್, ಸಹೋದರಿಯರಾದ ಸಾವಿತ್ರಿ, ರಾಜೀವಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಪತ್ನಿ ಪ್ರಮೀಳ ಈ ಹಿಂದೆ ನಿಧನ ಹೊಂದಿದ್ದಾರೆ.