ಪೆರ್ಣೆಯಲ್ಲಿ ತ್ಯಾಜ್ಯ ಉಪೇಕ್ಷೆ: ಕಾಸರಗೋಡಿನ  ಮೂವಿಮ್ಯಾಕ್ಸ್ ಥಿಯೇಟರ್‌ಗೆ 10,000 ರೂ. ದಂಡ

ಕುಂಬಳೆ: ನಾಯ್ಕಾಪು ಸಿದಿ ಬಯಲು ಪೆರ್ಣೆಯಲ್ಲಿ   ಉಪೇಕ್ಷಿಸಿದ ತ್ಯಾಜ್ಯವನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ ಅವರ ಮೂಲಕ ಅದನ್ನು ತೆರವುಗೊಳಿಸಲಾಯಿತು. ಮಾತ್ರವಲ್ಲದೆ ಅವರಿಗೆ 10,000 ರೂ. ದಂಡ ಹೇರಲಾಗಿದೆ. 27 ಪ್ಲಾಸ್ಟಿಕ್ ಗೋಣಿಚೀಲಗಳಲ್ಲಿ ತ್ಯಾಜ್ಯಗಳನ್ನು ತುಂಬಿಸಿ ಲಾರಿಯಲ್ಲಿ ತಂದು ಪೆರ್ಣೆಯ ಪಿ.ಜಿ. ಗೋವಿಂದ ಎಂಬವರ ತೋಟಕ್ಕಿರುವ ದಾರಿಯಲ್ಲಿ ಉಪೇಕ್ಷಿಸಲಾಗಿತ್ತು. ಈ ಕುರಿತು ಪುತ್ತಿಗೆ ಪಂಚಾಯತ್ ಹಾಗೂ ಪೊಲೀಸರಿಗೆ ಗೋವಿಂದ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ತಲುಪಿದ ಪಂಚಾಯತ್ ಅಧಿಕಾರಿಗಳು ಗೋಣಿಚೀಲಗಳನ್ನು ಬಿಚ್ಚಿ ಪರಿಶೀಲಿಸಿದಾಗ ಅದರಲ್ಲಿ  ಕಾಸರಗೋಡಿನ ಮೂವಿಮ್ಯಾಕ್ಸ್ ಟಾಕೀಸ್‌ನ …

ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ಬೇಡಿಕೆಗೆ ಅಂಗೀಕಾರ: ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ

ಕಾಸರಗೋಡು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕರ್ನಾಟಕ ರಾಜ್ಯ ಸಾರಿಗೆ ಬಸ್ (ಕೆಎಸ್‌ಆರ್‌ಟಿಸಿ)ಗಳಲ್ಲಿ ಕಾಸರಗೋಡಿನ  ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಸೌಕರ್ಯ ಮಂಜೂರು ಮಾಡಿದ್ದು, ಇದಕ್ಕಾಗಿ ಮುಂದಾಳುತ್ವ ವಹಿಸಿದ  ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿಯನ್ನು ವಿದ್ಯಾರ್ಥಿಗಳು ಹಾಗೂ ರಕ್ಷಕರು ಅಭಿನಂದಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರಕಾರದ ತೀರ್ಮಾನವನ್ನು ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಪೂಜಾರಿ ಸ್ವಾಗತಿಸಿದ್ದಾರೆ.   ಕಾಸರಗೋಡಿನ ವಿದ್ಯಾರ್ಥಿ ಗಳಿಗೂ ಉಚಿತ ಪ್ರಯಾಣ ಲಭ್ಯಗೊಳಿಸಲು ಸರಕಾರದಿಂದ ಆದೇಶ ಲಭಿಸಿದೆಯೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. …

ಬಿಎಂಎಸ್ ಮೀಂಜ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಮಂಜೇಶ್ವರ: ಭಾರತೀಯ ಮಜ್ಡೂರ್ ಸಂಘ ಮಿಂಜ ಪಂಚಾಯತ್ ಸಮ್ಮೇಳನ ಮೊರತ್ತಣೆ ಬಿ ಆರ್ ಕಾಂಪ್ಲೆಕ್‌ನ ಅನುಗ್ರಹ ಸಭಾಂಗಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ರವಿಚಂದ್ರ ಶೆಟ್ಟಿ ಪದೆಂಜಿಬೈಲ್ ಅಧ್ಯಕ್ಷತೆ ವಹಿಸಿದÀÄ್ದ, ಬಿಎಂಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ ಯಶವಂತಿ ಬೆಜ್ಜ ಉದ್ಘಾಟಿಸಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಮುಖ್ಯ ಭಾಷಣ ಮಾಡಿದರು. ನೂತನ ಪದಾಧಿಕಾರಿಗಳನ್ನು ವಲಯ ಅಧ್ಯಕ್ಷ ರವಿ ಎಂ.ಕೆ. ಕೋಳ್ಯೂರು ಆಯ್ಕೆ ಮಾಡಿದರು. ಪಂಚಾಯತ್ ಸದಸ್ಯೆ ಶಾಂತ ಕೋಳ್ಯೂರು, ಗೋಪಿನಾಥ್ ಮೊರತ್ತಣೆ ಭಾಗವಹಿಸಿದರು. ಸತೀಶ್ ಬಟ್ಟಿಪದವ್ ವರದಿ …

ಮಲಯಾಳ ಭಾಷಾ ಮಸೂದೆ: ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ನೂತನ ಉಸ್ತುವಾರಿ ಸಚಿವರಿಗೆ ಮನವಿ

ಕಾಸರಗೋಡು: ರಾಜ್ಯದಲ್ಲಿ ಕಳೆದ ಎಡರಂಗ ಸರಕಾರ ಜ್ಯಾರಿಗೆ ತಂದ ಮಲಯಾಳ ಭಾಷಾ ಕಡ್ಡಾಯ ಮಸೂದೆಯಿಂದಾಗಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಆಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಆ ಮಸೂದೆಯಲ್ಲ್ಲಿರುವ ಕನ್ನಡ ವಿರೋಧಿ ಅಂಶಗಳ ಬಗ್ಗೆ ನೂತನ ಸರಕಾರಕ್ಕೆ ಮನವರಿಕೆ ಮಾಡಲು ಮನವಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಜಿಲ್ಲೆಗೆ ತಲುಪಿದ ರಾಜ್ಯ ಸ್ಥಳೀಯಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಾಜಿಯವರಿಗೆ ಕರ್ನಾಟಕ ಸಮಿತಿ ಮೂಲಕ ಈ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ  ತಂಡದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ …

ಆಟೋ ಚಾಲಕ ನಿಧನ

ಬದಿಯಡ್ಕ: ಇಲ್ಲಿನ ಪೇಟೆಯಲ್ಲಿ ಆಟೋ ಚಾಲಕರಾಗಿದ್ದ ವಳಮಲೆ ನಿವಾಸಿ ಸುನಿ ಯಾನೆ ಸುರೇಶ್ ರೈ (43) ನಿಧನಹೊಂದಿದರು. ಸಕ್ರಿಯ ಸಂಘ ಪರಿವಾರ ಕಾರ್ಯಕರ್ತರಾ ಗಿದ್ದರು. ಮೊನ್ನೆ ರಾತ್ರಿ ಇವರು ಊಟಮಾಡಿ ಮಲಗಿದ್ದು ನಿನ್ನೆ ಬೆಳಿಗ್ಗೆ ಏಳದ ಹಿನ್ನೆಲೆಯಲ್ಲಿ ನೋಡಿದಾಗ  ಮೃತಪಟ್ಟಿರು ವುದು ತಿಳಿದುಬಂದಿದೆ. ಕೂಡಲೇ ಬದಿಯಡ್ಕದ ಆಸ್ಪತ್ರೆಗೆ ಕೊಂಡೊಯ್ದು ಮರಣ ದೃಢೀಕರಿಸ ಲಾಗಿದೆ.  ದಿ| ರಾಧಾಕೃಷ್ಣ ರೈಯವರ ಪುತ್ರನಾದ ಇವರು ಅವಿವಾಹಿತ ರಾಗಿದ್ದರು. ಮೃತರು ತಾಯಿ  ಚಂದ್ರಾವತಿ, ಸಹೋದರ ಪ್ರಸನ್ನ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.