ಕೆವಿವಿಇಎಸ್ ಜಿಲ್ಲಾ ಕೌನ್ಸಿಲ್ ಸಭೆ: ಪದಾಧಿಕಾರಿಗಳ ಆಯ್ಕೆ

ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಜಿಲ್ಲಾ ಕೌನ್ಸಿಲ್ ಸಭೆ ಕಾಸರಗೋಡು ನಗರಸಭಾ ಕಾನ್ಫರೆನ್ಸ್ ಸಭಾಂಗಣದಲ್ಲಿ ಜರಗಿತು.  ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ. ಅಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದು, ರಾಜ್ಯಾಧ್ಯಕ್ಷ ರಾಜು ಅಪ್ಸರ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಸ್ಯ ಮೇಚೇರಿ ಪ್ರಧಾನ ಭಾಷಣ ಮಾಡಿದರು. ರಾಜ್ಯ ಕೋಶಾಧಿಕಾರಿ ಎಸ್. ದೇವರಾಜನ್, ರಾಜ್ಯ ಉಪಾಧ್ಯಕ್ಷ ಎಂ.ಕೆ. ಥೋಮಸ್ ಕುಟ್ಟಿ, ರಾಜ್ಯ ಕಾರ್ಯದರ್ಶಿಗಳಾದ ವೈ. ವಿಜಯನ್, ವಿ. ಸಬಿಲ್‌ರಾಜ್, ಪಾಲಕ್ಕಾಡ್ ಜಿಲ್ಲಾ ಕಾರ್ಯದರ್ಶಿ ಕೆ.ಎ. ಹಮೀದ್, ಕೊಲ್ಲಂ …

ಬಿಜೆಪಿ ಕೇರಳ ರಾಜಕೀಯದ ಬದಲಿ ಶಕ್ತಿ- ಎಂ.ಎಲ್. ಅಶ್ವಿನಿ

ಕುಂಬಳೆ: ಎಲ್ಲಾ ಸಂದರ್ಭಗಳಲ್ಲೂ ಜೊತೆಗೂಡಿ ಬಿಜೆಪಿಯನ್ನು ಸೋಲಿಸಬಹುದೆಂದು, ಭ್ರಷ್ಟಾಚಾರ ಪ್ರಶ್ನಿಸಲ್ಪಡಲಿಕ್ಕಿಲ್ಲವೆಂದು ತಿಳಿದುಕೊಂಡ ಎಡ-ಬಲ ಒಕ್ಕೂಟಗಳ ಧೋರಣೆ ಈ ವಿಧಾನಸಭಾ ಚುನಾವಣೆಯೊಂದಿಗೆ ಇಲ್ಲದಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಕಚೇರಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮೂವರು ಬಿಜೆಪಿ ಪ್ರತಿನಿಧಿಗಳನ್ನು ರಾಜ್ಯ ವಿಧಾನಸಭೆಗೆ ಆಯ್ಕೆ ಮಾಡಿರುವುದರ ಮೂಲಕ ಬಿಜೆಪಿ ಕಾರ್ಯಕರ್ತರ ನಿರೀಕ್ಷೆ ಹಾಗೂ ಹೊಣೆಗಾರಿಕೆ ಹೆಚ್ಚಿದೆ. ರಾಜ್ಯದಲ್ಲಿ ಎಡ-ಬಲ ಒಕ್ಕೂಟ ಗಳಿಗಿರುವ ಬದಲಾಗಿ ಬಿಜೆಪಿಯನ್ನು ಜನರು ಕಂಡುಕೊಂಡಿರುವುದಾಗಿಯೂ ಈ …

ಸುಬ್ರಾಯ ಗಟ್ಟಿ ನಿಧನ

ಮೊಗ್ರಾಲ್‌ಪುತ್ತೂರು: ಕಲ್ಲಂಗೈ ಬಳ್ಳೂರು ನಿವಾಸಿ ಸುಬ್ರಾಯ ಗಟ್ಟಿ (82) ನಿಧನ ಹೊಂದಿದರು. ಇವರು ಕೃಷಿಕನಾಗಿದ್ದರು. ಮೃತರು ಪತ್ನಿ ಗಿರಿಜ, ಮಕ್ಕಳಾದ ಸುಮಲತ, ಸುಜಿತ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಸಹೋದರರಾದ ನಾರಾಯಣ, ಸೀನ, ಸಹೋದರಿ ಕಮಲ ಎಂಬಿವರು ಈ ಹಿಂದೆ ನಿಧನರಾಗಿದ್ದಾರೆ.