ಮನೆಗಳ ಮೇಲೆ ಗುಡ್ಡೆ ಕುಸಿದು ಮೂವರು ದಾರುಣ ಮೃತ್ಯು; ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು: ಮಂಗಳೂರು ಕಂಕನಾಡಿ ಗರೋಡಿ ಎಂಬಲ್ಲಿ ಇಂದು ಮುಂಜಾನೆ ದಾರುಣ ಘಟನೆ
ಮಂಗಳೂರು: ಧಾರಾಕಾರ ಮಳೆ ಸುರಿಯುತ್ತಿದ್ದಂತೆ ಗುಡ್ಡೆ ಕುಸಿದು ಮನೆಗಳ ಮೇಲೆ ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕಂಕನಾಡಿ ನಾಗುರಿ ಬಳಿಯ ಗರೋಡಿ ಎಂಬಲ್ಲಿ ನಡೆದಿದೆ. ಬಿಹಾರ ನಿವಾಸಿಗಳಾದ ಲಾಲ್ ಬಾಬು ಎಂಬವರ ಮಕ್ಕಳಾದ ಚೌರಸ್ಯ (8), ಪ್ಯಾರಿ (4), ನೆರೆಮನೆ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಶಾಂತ (40) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆ ದುರ್ಘಟನೆ ಸಂಭವಿಸಿದೆ. ಬಿಹಾರ ನಿವಾಸಿಗಳಾದ ಕುಟುಂಬಗಳು ವಾಸಿಸುವ ಎರಡು ಮನೆಗಳ ಮೇಲೆ …