ಪುತ್ತಿಗೆಯಲ್ಲಿ ನಾಟಿ ಸಂತೆ, ಕೃಷಿಕರ ಸಂಗಮ

ಪುತ್ತಿಗೆ: ಪಂಚಾಯತ್ ಹಾಗೂ ಕೃಷಿ ಇಲಾಖೆ ಯಿಂದ ಜಂಟಿಯಾಗಿ ಕೃಷಿ ಭವನ ಪರಿಸರದಲ್ಲಿ ನಾಟಿ ಕೆಲಸ ಸಂತೆ ಹಾಗೂ ಕೃಷಿಕರ ಸಂಗಮ ನಡೆಲಾಗಿದೆ. ಪುತ್ತಿಗೆ ಪಂಚಾಯತ್ ಉಪಾಧ್ಯಕ್ಷ ಇ.ಕೆ. ಮುಹಮ್ಮದ್ ಕುಂಞಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಫಿದಾ ಊಜಂಪದವು ಉದ್ಘಾಟಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷ ಸಕೀನಾ ಶರೀಫ್, ಬ್ಲೋಕ್ ಸದಸ್ಯ ಜುನೈದ್ ಉರ್ಮಿ, ವಾರ್ಡ್ ಪ್ರತಿನಿಧಿಗಳಾದ ಎಸ್.ಎ. ಅಬ್ದುಲ್ಲ, ಬಾಲಕೃಷ್ಣ ರೈ, ಶಿವಪ್ಪ ರೈ, ಲಕ್ಷ್ಮಿ ವಿ. ಭಟ್, ಹಮೀದ್ ಬಾಡೂರು, ಜಯಂತಿ, ಪ್ರಗತಿಪರ …

ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದಿಂದ ಕನ್ನಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಕಾಸರಗೋಡು: ಕನ್ನಡ ಗ್ರಾಮದಲ್ಲಿ ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರಗಿತು. ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಜಿಲ್ಲೆಯಲ್ಲಿ ಕನ್ನಡ ಪತ್ರಿಕೋಧ್ಯಮ ನಡೆದು ಬಂದ ದಾರಿ ಮತ್ತು ಇತಿಹಾಸದ ಬಗ್ಗೆ ಮಾತ ನಾಡಿದರು. ಅಂಕಣಕಾರ ಕೆ. ಶ್ಯಾನು ಭೋಗ್ ಕೂಡ್ಲು …

ಚೆರುಗೋಳಿಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ:ಹಲವು ವಿದ್ಯುತ್ ಕಂಬ ಹಾನಿ, ತಪ್ಪಿದ ದುರಂತ

ಮಂಗಲ್ಪಾಡಿ: ಚೆರುಗೋಳಿ ಶಾಲಾ ಬಳಿಯಲ್ಲಿರುವ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದ ಪರಿಣಾಮ ಪರಿಸರದ ಸುಮಾರು ಎಂಟು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ವೇಳೆ ರಸ್ತೆಯಲ್ಲಿ ಯಾರು ಇಲ್ಲದಿರು ವುದರಿಂದ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿಹೋಗಿದೆ. ಮರ ಬಿದ್ದ ವೇಳೆ ತಂತಿ ಹಾಗೂ ಕಂಬಗಳು ಮುರಿದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಗೊಂಡಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಾಹನ ಸಹಿತ ಜನರÀÄ ನಿತ್ಯವೂ ಸಂಚರಿಸುತ್ತಿದ್ದು, ಘಟನೆ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದಿದ್ದುದರಿಂದ ಅಪಾಯತಪ್ಪಿದೆ. ಕೂಡಲೇ ವಿದ್ಯುತ್ ಇಲಾಖೆ …

ಬದಿಯಡ್ಕದಲ್ಲಿ ವಿಬಿ ಜಿ ರಾಮ್ ಜಿ ಆರಂಭದ ನೇರಪ್ರಸಾರ ವೀಕ್ಷಣೆ

ಬದಿಯಡ್ಕ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಿಬಿ ಜಿ ರಾಮ್ ಜಿ (ವಿಕಸಿತ್ ಭಾರತ್ – ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಆಜೀವಿಕಾ ಮಿಷನ್ – ಗ್ರಾಮೀಣ್) ಯೋಜನೆಯ ಆರಂಭದ ನೇರ ಪ್ರಸಾರ ವೀಕ್ಷಣೆ ಬದಿಯಡ್ಕ ಪಂಚಾಯತ್ ಸಭಾಂಗಣದಲ್ಲಿ ಜರಗಿತು.ದೇಶದಾದ್ಯಂತ ಜುಲೈ ೧ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿರುವ ಈ ಯೋಜನೆಯ ರಾಷ್ಟ್ರೀಯ ಉದ್ಘಾಟನಾ ಸಮಾರಂಭದ ನೇರ ಪ್ರಸಾರಕ್ಕೆ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷೆ …

ದೈವ ಕಲಾವಿದ ನಿಧನ

ಹೊಸದುರ್ಗ: ದೈವ ಕಲಾವಿದ ಮಾಂಙಾಡ್ ಅರಮಂಗಾನದ ಕೆ. ಚಂದ್ರನ್ (61) ನಿಧನ ಹೊಂದಿ ದರು. ಮೃತರು ಪತ್ನಿ ಪ್ರೇಮ, ಮಕ್ಕಳಾದ ರಂಜಿತ್, ರಂಜಿನಿ, ರಜೀಶ್, ರಜಿತ, ಅಳಿಯಂದಿರಾದ ಉಮೇಶ್, ಪ್ರಜಿಲ್, ಸೊಸೆ ರಜೀಶ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪೆರ್ಲ-ಸ್ವರ್ಗ ಅಂತಾರಾಜ್ಯ ರಸ್ತೆ ಅಭಿವೃದ್ಧಿಗೆ ಒಟ್ಟಾಗಿ ಹೋರಾಟ ಮಾಡಲು ಜಿ.ಪಂ. ಸದಸ್ಯ ಸೋಮಶೇಖರ ಜೆ.ಎಸ್. ಕರೆ

ಪೆರ್ಲ: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸರಕಾರ, ಅಧಿಕಾರಿ ಗಳಿಗೆ ಕೇವಲ ಮನವಿ ಸಲ್ಲಿಸಿದರೆ ಮಾತ್ರ ನಮ್ಮ ಜವಾಬ್ದಾರಿ ಮುಗಿಯದು. ರಸ್ತೆ ಹೀನಾಯ ಸ್ಥಿತಿಯನ್ನು ಸರಕಾರಕ್ಕೆ ಗಮನಕ್ಕೆ ತಂದು ಕ್ರಮಬದ್ಧವಾಗಿ ಕಾರ್ಯ ನಿರ್ವಹಿಸಿದರೂ ಪ್ರಯೋಜನ ವಾಗದಿದ್ದರೆ ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಬೇಕೆಂದು ಜಿಲ್ಲಾ ಪಂ. ಸದಸ್ಯ ಸೋಮಶೇಖರ್ ಜೆ.ಎಸ್. ನುಡಿದರು. ಪೆರ್ಲ-ಸ್ವರ್ಗ ಅಂತಾರಾಜ್ಯ ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದೊಂದಿಗೆ ನಡೆದ ನಾಗರಿಕ ಕ್ರಿಯಾ ಸಮಿತಿ ರಚನೆ ಸಭೆಯಲ್ಲಿ ಅವರು …