ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಸಾಗಿಸಿದ ಇಬ್ಬರು ಆರೋಪಿಗಳ ಬಂಧನ
ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹಸು ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಮಂಗಳೂರು ಜೋಕಟ್ಟೆ ಬಜ್ಪೆಯ ರಾಸಿಕ್ (21),ಉಳ್ಳಾಲ ಅಳಿಕೆಯ ಮುಹಮ್ಮದ್ ಇಬ್ರಾಸ್ (26) ಎಂಬಿವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ಮುಂಜಾನೆ 1.30ರ ವೇಳೆ ಕನ್ಯಪ್ಪಾಡಿ ರಹ್ಮತ್ ಮಂಜಿಲ್ನ ಕೆ.ಎಂ. ಮುಹಮ್ಮದ್ರ ಮನೆಯ ಮುಂಭಾಗದಲ್ಲಿರುವ ಅಂಗಡಿಯ ಜಗಲಿಯಲ್ಲಿ ಮಲಗಿದ್ದ ಹಸುವನ್ನು …
Read more “ಅಂಗಡಿ ಜಗಲಿಯಲ್ಲಿ ಮಲಗಿದ್ದ ಹಸುವನ್ನು ಕಳವುಗೈದು ಸಾಗಿಸಿದ ಇಬ್ಬರು ಆರೋಪಿಗಳ ಬಂಧನ”