ಜಿಲ್ಲೆಯಲ್ಲಿ ಖಾಸಗಿ ಬಸ್ ಮುಷ್ಕರ ಪೂರ್ಣ: ಬಸ್ ಮಾಲಕರು, ಕಾರ್ಮಿಕರು, ಕುಟುಂಬದವರಿಂದ ಕಲೆಕ್ಟರೇಟ್ಗೆ ಮಾರ್ಚ್, ಧರಣಿ ಮುಷ್ಕರ
ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ ಬಸ್ ಮುಷ್ಕರ ನಡೆಯುತ್ತಿದೆ. ಇಂದು ಬೆಳಿಗ್ಗೆ ಆರಂಭ ಗೊಂಡ ಮುಷ್ಕರ ನಿರೀಕ್ಷೆಗೂ ಮೀರಿ ಯಶಸ್ವಿ ಕಂಡಿದೆ. ಮುಷ್ಕರ ನಿರತ ಬಸ್ ಮಾಲಕರು, ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಇಂದು ಬೆಳಿಗ್ಗೆ ಕಾಸರಗೋಡು ಕಲೆಕ್ಟರೇಟ್ಗೆ ಮಾರ್ಚ್ ನಡೆಸಿ ಧರಣಿ ಮುಷ್ಕರ ಹೂಡಿದರು. …