ಕಾಸರಗೋಡು ತ್ಸುನಾಮಿ ಕಾಲನಿಯ ಸೇಫ್ಟಿ  ಟ್ಯಾಂಕ್‌ನಿಂದ ತ್ಯಾಜ್ಯ ಹೊರಕ್ಕೆ: ಕಾಲನಿ ನಿವಾಸಿಗಳಿಂದ ನಗರಸಭಾ ಕಚೇರಿ ಮುಂದೆ ಧರಣಿ

ಕಾಸರಗೋಡು: 101 ಫ್ಲಾಟ್‌ಗಳಿರುವ ಕಾಸರಗೋಡು ತ್ಸುನಾಮಿ ಕಾಲನಿಯ ಸೇಫ್ಟಿ  ಟ್ಯಾಂಕ್  ತುಂಬಿ ತುಳುಕುತ್ತಿದೆ. ಕಾಲನಿಯಲ್ಲಿರುವ  ಇಷ್ಟು ಕುಟುಂಬಗಳ  ತ್ಯಾಜ್ಯ ತುಂಬಲು  ಪ್ರಸ್ತುತವುಳ್ಳ ಸೇಫ್ಟಿ  ಟ್ಯಾಂಕ್  ಸಾಕಾಗದೆ ಇರುವುದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ  ಬೇರೆ ಸೇಫ್ಟಿ ಟ್ಯಾಂಕ್ ಸ್ಥಾಪಿಸಬೇಕು, ಅಲ್ಲದೆ ಸಾಂಕ್ರಾಮಿಕ ರೋಗಗಳಿಂದ ಜನರನ್ನು ಸಂರಕ್ಷಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ಕಾಲನಿಯ ನಿವಾಸಿಗಳು ನಗರಸಭಾ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ೩೪ನೇ ವಾರ್ಡ್ ಕೌನ್ಸಿಲರ್ ಸುನಿಲ್ ಶೆಟ್ಟಿ ಧರಣಿ ಯನ್ನು ಉದ್ಘಾಟಿಸಿದರು. ಬಳಿಕ  ನಗರಸಭಾ ಚೆಯರ್ ಪರ್ಸನ್ ಶಾಹಿನಾ …

ಕುಂಬ್ಡಾಜೆ ಆಯುರ್ವೇದ ಆಸ್ಪತ್ರೆ ಬಳಿ ರಸ್ತೆಗೆ ಬಿದ್ದ ಮರ ತೆರವು

ಮಾರ್ಪನಡ್ಕ: ಕುಂಬ್ಡಾಜೆ ೫ನೇ ವಾರ್ಡ್ ವ್ಯಾಪ್ತಿಯ ಬೆಳಿಂಜ ಆಯುರ್ವೇದ ಡಿಸ್ಪೆನ್ಸರಿ ಸಮೀಪವಿರುವ ದೊಡ್ಡ ಆಲದಮರವೊಂದು ರಸ್ತೆಗೆ ಮಗುಚಿ ಬಿದ್ದಿದೆ. ಇದರಿಂದ ಸಂಚಾರ ಮೊಟಕುಗೊಂಡಿತ್ತು. ಅಗ್ನಿಶಾಮಕದಳ ತಲುಪಿ ಮರದ ರೆಂಬೆಗಳನ್ನು ಕತ್ತರಿಸಿ ತೆಗೆದು ಸಂಚಾರ ಪುನರ್‌ಸ್ಥಾಪಿಸಿದರು. ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್  ವಿ. ಸುಗುರ ನೇತೃತ್ವದಲ್ಲಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದೆ. ಜೆಸಿಬಿಯ ಸಹಾಯದಿಂದ ರಸ್ತೆಗೆ ಬಿದ್ದಿದ್ದ ಮರದ ತುಂಡುಗಳನ್ನು ತೆರವುಗೊಳಿಸಲಾಗಿದೆ. ಅಗ್ನಿಶಾಮಕ ದಳದ ಎಸ್. ಅರುಣ್ ಕುಮಾರ್, ಅತುಲ್ ರವಿ, ಅಶ್ವಿನಿ ಎಸ್.ಎಂ, ಅರುಣ ಪಿ. …

ಟ್ರಾಫಿಕ್ ಪರಿಷ್ಕಾರ ಸಮಾಲೋಚನೆ ನಡೆಸಿ ಕೈಗೊಂಡ ತೀರ್ಮಾನ ವ್ಯಾಪಾರಿಗಳ ಆರೋಪ ಹುರುಳಿಲ್ಲದ್ದು- ಕುಂಬಳೆ ಪಂ. ಆಡಳಿತ ಸಮಿತಿ

ಕುಂಬಳೆ:  ಕುಂಬಳೆ ಪೇಟೆಯ ಸಮಗ್ರ ಅಭಿವೃದ್ಧಿ ಮುಂದಿಟ್ಟು ಎಲ್ಲರೊಂದಿಗೆ ಚರ್ಚಿಸಿದ ಬಳಿಕ ಪಂಚಾಯತ್ ಆಡಳಿತ ಸಮಿತಿ ಕುಂಬಳೆಯಲ್ಲಿ ಟ್ರಾಫಿಕ್ ಪರಿಷ್ಕಾರ ಜ್ಯಾರಿಗೊಳಿಸಿರುವುದಾಗಿಯೂ ಈ ಬಗ್ಗೆ ಆಧಾರರಹಿತ ಆರೋಪವನ್ನು ಅಲ್ಲಗಳೆದು ಆಡಳಿತ ಸಮಿತಿ ಸದಸ್ಯರು ಸುದ್ಧಿಗೋಷ್ಠಿ ನಡೆಸಿದರು. ರಾಜಕೀಯ ಪಕ್ಷ, ವ್ಯಾಪಾರಿ ಮೋಟಾರು ಕಾರ್ಮಿಕರ ಪ್ರತಿನಿಧಿಗಳು ಭಾಗವಹಿಸಿದ ಸಭೆಯ ತೀರ್ಮಾನ ಪ್ರಕಾರ ಈಗ ಪರಿಷ್ಕಾರ ಜ್ಯಾರಿಗೊಳಿಸಲಾಗಿದೆ. ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಮುಖಂಡರಾದ ರಾಜೇಶ್ ಮನಯತ್, ಕಾರ್ಯದರ್ಶಿ ಸತ್ತಾರ್ ಆರಿಕ್ಕಾಡಿ, ಕೋಶಾಧಿಕಾರಿ ಅನ್ವರ್ ಸಿಟಿ ಸಹಿತದವರು ಭಾಗವಹಿಸಿದ ಸಭೆಯಲ್ಲಿ  …

ಕೆ. ರಮಾನಂದ ಬಂಗೇರ ನಿಧನ

ಕಾಸರಗೋಡು: ಬೀರಂತಬೈಲು ಸುಗುಣ ನಿಲಯದ ಕೆ. ರಮಾನಂದ ಬಂಗೇರ (91) ನಿಧನ ಹೊಂದಿದರು. ಇವರು ಇಂಡಿಯನ್ ಆಯಿಲ್ ಕಾರ್ಪರೇಶನ್ ಕಂಪೆನಿಯಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದರು. ಇವರ ಪತ್ನಿ ಸುಗುಣ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಕೀರ್ತಿ, ಲತಾ, ನರೇಶ್, ಅಳಿಯಂದಿರಾದ ಮಹೇಶ್, ಕುಮಾರ್, ಸೊಸೆ ಸವಿತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.