ಕೊಯಿಪ್ಪಾಡಿಯಲ್ಲಿ ಕಡಲ್ಕೊರೆತ ತೀವ್ರ: ತಡೆಗೋಡೆ ಬಹುತೇಕ ನಾಶ; ನಾಗರಿಕರಲ್ಲಿ ಹೆಚ್ಚಿದ ಆತಂಕ

ಕುಂಬಳೆ: ಇಲ್ಲಿನ ಕೊಯಿಪ್ಪಾಡಿಯಲ್ಲಿ ಸಮುದ್ರಕ್ಕೆ ನಿರ್ಮಿಸಲಾದ ತಡೆಗೋಡೆ ಸಮುದ್ರಪಾಲಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಮುದ್ರ ತಡೆಗೋಡೆ ಈಗಾಗಲೇ ಅರ್ಧಕ್ಕಿಂತ ಹೆಚ್ಚು ಸಮುದ್ರಪಾ ಲಾಗಿದೆಯೆಂದು ನಾಗರಿಕರು ತಿಳಿಸುತ್ತಿದ್ದಾರೆ. ಕಡಲ್ಕೊರೆತ ತಡೆಯಲೆಂದು ತಂದು ಹಾಕಲಾದ ಕಗ್ಗಲ್ಲುಗಳೆಲ್ಲ ಸಮುದ್ರಪಾಲಾಗುವು ದರೊಂದಿಗೆ ಇಲ್ಲಿನ ಜನರಲ್ಲಿ ಆತಂಕ ಇನ್ನಷ್ಟು ತೀವ್ರಗೊಂಡಿದೆ.  ಸಮುದ್ರಬ ದಿಯಲ್ಲಿರುವ ತೆಂಗಿನ ಮರಗಳು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಸಾಧ್ಯತೆಯಿದೆ. ಕೊಯಿಪ್ಪಾಡಿ ಯಿಂದ ಪೆರ್ವಾಡ್ ಕಡಪ್ಪುರವರೆಗೆ ಕಡಲ್ಕೊರೆತ ತೀವ್ರಗೊಂಡಿರುವುದಾಗಿ ಹೇಳಲಾಗುತ್ತಿದೆ.  ಕೊಯಿಪ್ಪಾಡಿ ಹಾಗೂ ಪರಿಸರ ಪ್ರದೇಶಗಳಲ್ಲಿ ನೂರರಷ್ಟು ಕುಟುಂಬಗಳು ವಾಸಿಸುತ್ತಿವೆ. ಈ ಹಿಂದೆಯೂ …

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ನಿಧನ

ಕುಂಬಳೆ: ಕಾನ ಪೊಟ್ನೋಟ ನಿವಾಸಿ, ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಸುಬ್ರಹ್ಮಣ್ಯ ಭಟ್ (87) ಶನಿವಾರ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಜನಸಂಘದ ಕಾಲದಿಂದಲೇ ಸಂಘ ಪರಿವಾರದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು. ಮೃತರು ಪತ್ನಿ ಲಕ್ಷಿ ಭಟ್, ಮಕ್ಕಳಾದ ಹರಿಪ್ರಸಾದ್, ಶಾಂತ, ರಾಜಶ್ರೀ, ಸೊಸೆ ದೀಪ, ಅಳಿಯಂದಿ ರಾದ ಸುರೇಶ್ ಭಟ್, ಗೋವಿಂದ ರಾಜ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು, ವಿವಿಧ ರಾಜಕೀಯ ನೇತಾರರ ಸಹಿತ ಹಲವಾರು …

ಎನ್‌ಆರ್‌ಜಿ ವರ್ಕರ್ಸ್ ಯೂನಿಯನ್‌ನಿಂದ ಪೈವಳಿಕೆ ಅಂಚೆ ಕಚೇರಿಗೆ ಮಾರ್ಚ್

ಪೈವಳಿಕೆ: ಕೇಂದ್ರ ಸರಕಾರ ಉದ್ಯೋಗ ಖಾತರಿ ಯೋಜನೆ ಯನ್ನು ಬುಡಮೇಲುಗೊಳಿಸುತ್ತಿದೆ ಎಂದು ಆರೋಪಿಸಿ ಎನ್‌ಆರ್‌ಜಿ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಪೈವಳಿಕೆ ಅಂಚೆ ಕಚೇರಿಗೆ ಮಾರ್ಚ್ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಯಿತು. ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯ ಅಬ್ದುಲ್ ರಸಾಕ್ ಚಿಪ್ಪಾರ್ ಉದ್ಘಾಟಿಸಿದರು. ಸರಸ್ವತಿ ಎಲಿಯಾಣ ಅಧ್ಯಕ್ಷತೆ ವಹಿಸಿದರು. ಸಂಘಟನೆಯ ಏರಿಯಾ ಸಮಿತಿ ಕಾರ್ಯದರ್ಶಿ ಅಬ್ದುಲ್ಲ ಪೈವಳಿಕೆ ಸ್ವಾಗತಿಸಿದರು. ನೇತಾರರಾದ ಐರಿನ್ ಜೋಸ್ಫಿನ್, ಅಶೋಕ ಭಂಡಾರಿ, ಚಂದ್ರ ನಾಯ್ಕ್, ಮಾತನಾಡಿದರು.