ಹಿಂದೂ ಸಮಾಜ ಸೌಹಾರ್ದ ವೇದಿಕೆಯ  ರಾಜ್ಯ ಸಮ್ಮೇಳನ ಯಶಸ್ವಿಗೆ ಕರೆ

ಮಂಜೇಶ್ವರ: ಆಗಸ್ಟ್ ೮ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು. ಹಿಂದುಳಿದ ವರ್ಗಗಳ, ಸಮುದಾಯಗಳ ಹಕ್ಕುಗಳು ಮತ್ತು ನ್ಯಾಯಸಮ್ಮತ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಸಂಘಟಿತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಸಭೆ ಅಭಿಪ್ರಾಯಪಟ್ಟಿತು. ಹಿಂದುಳಿದ ವರ್ಗಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು …

ಕಮಲ ರೈ ನಿಧನ

ಮುಳ್ಳೇರಿಯ: ಆದೂರು ಕಾನಕ್ಕೋಡು ನಿವಾಸಿ ನಾರಾಯಣ ರೈ ಅವರ ಪತ್ನಿ ಕಮಲ ರೈ (೬೮) ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಕರುಣಾಕರ್ ರೈ, ಸುಮಿತ್ರ, ಸ್ವರ್ಣಲತ, ಅಳಿಯಂದಿರಾದ ದಿನೇಶ್ ಚೌಟ, ಪ್ರಶಾಂತ್ ಭಂಡಾರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಎಡನೀರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಬದಿಯಡ್ಕ: ವರ್ತಮಾನದ ತಲ್ಲಣಗಳಿಗೆ ಕಾರಣಗಳನ್ನು ಪತ್ತೆ ಮಾಡುತ್ತಾ ಹೋದಲ್ಲಿ ಪರಿಹಾರಗಳು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆದಿ ಶಂಕರರು ನೀಡಿದ ಸಂದೇಶಗಳು ನಮ್ಮ ಕಣ್ತೆರೆಸಿ ಬದುಕಿನ ಮೂಲ ಲಕ್ಷö್ಯದ ದಾರಿ ತೋರಿಸುತ್ತದೆ. ಶ್ರೀಶಂಕರರ ಸಂದೇಶಗಳನ್ನು ಪಾಲಿಸುತ್ತಾ ಬಂದಲ್ಲಿ ಆಂತರ್ಯದ ಸಂಘರ್ಷಗಳಿಗೆ ಉತ್ತರ ಕಂಡುಕೊಳ್ಳಬಹುದು. ಅವರ ಸಂದೇಶ ಗಳನ್ನು ಪಸರಿಸುವಲ್ಲಿ ಪೀಠಗಳು, ಮಠಾಧೀಶರ ಕೊಡುಗೆಗಳು ಸಮಾಜಕ್ಕೆ ಅತ್ಯಪೂರ್ವವಾದುದು ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯ ವ್ಯಕ್ತಪಡಿಸಿದರು.ಎಡನೀರು ಮಠದ ಶ್ರೀ ಸಚ್ಚಿದಾ ನಂದ ಭಾರತೀ ಸ್ವಾಮೀಜಿಯವರ …

ಬಿಜೆಪಿ ಕುಂಬಳೆ ಮಂಡಲ ಸಮಿತಿಯಿಂದ ಗುರುವಂದನೆ

ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಯಕ್ಷಗಾನ ಕಲಾವಿದ ರಾಮ ಅವರನ್ನು ಗುರು ಪೂರ್ಣಿಮೆ ಪ್ರಯಕ್ತ ಗೌರವಿಸಲಾಯಿತು.ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷರಾದ ಪಿ. ರಮೇಶ್, ಮುರಳೀಧರ, ಕುಂಬಳೆ ಮಂಡಲ ಅಧ್ಯಕ್ಷ ವಿಕ್ರಮ್ ಪೈ, ಮಂಡಲ ಉಪಾಧ್ಯಕ್ಷರಾದ ಬಾಲಕೃಷ್ಣ ಅಂಬಾರ್, ಪದ್ಮನಾಭ, …

ನಿವೃತ್ತ ಮುಖ್ಯೋಪಾಧ್ಯಾಯ ನಿಧನ

ಮುಳ್ಳೇರಿಯ: ಕುಂಟಾರು ಹುಣಸೆಯಡ್ಕ ನಿವಾಸಿ, ನಿವೃತ್ತ ಮುಖ್ಯೋಪಾಧ್ಯಾಯ ವೀರೋಜಿ ರಾವ್ (90) ನಿಧನ ಹೊಂದಿದರು. ಎಡಪರಂಬ ಎಲ್‌ಪಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ಪ್ರವೀಣ್ ಕುಮಾರ್, ಯಶ್ವಂತ್ ಕುಮಾರ್, ಕಿಶೋರ್ ಕುಮಾರ್, ಸೊಸೆಯಂದಿರಾದ ಗೀತಾ ಕುಮಾರಿ, ಯಶೋಧ, ನವ್ಯ ಕುಮಾರಿ, ಸಹೋದರಿಯರಾದ ಲೀಲಾವತಿ ಆದೂರು ಮೇಗಿನಮನೆ, ಶೀಲಾವತಿ ಮಂಗಳೂರು, ಶಾರದ ಮಂಗಳೂರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಹದಗೆಟ್ಟು ಸಂಚಾರ ಸಮಸ್ಯೆಯಿಂದ ಕೂಡಿದ  ಕೋಡಿಬೈಲು ರಸ್ತೆ ದುರಸ್ತಿಗೆ ಆಗ್ರಹ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲುನಲ್ಲಿ ಸಂಗಮ ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಣ್ಣಂಗುಳಿಯಿAದ ಕೋಡಿಬೈಲು ಹಾಗೂ ಉಪ್ಪಳ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಪ್ರದೇಶಕ್ಕೆ ಸಾಗುವ ರಸ್ತೆಗಳು ಶೋಚನೀಯವಾಗಿವೆ.ಈ ಪ್ರದೇಶದಲ್ಲಿ ನೂರಾರು ಮನೆಗಳು, ಶಾಲೆ ಇದ್ದು, ನೂರಾರು ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ಅಲ್ಲಲ್ಲಿ ಡಾಮಾರೀಕರಣ, ಕಾಂಕ್ರಿಟ್, ಇಂಟರ್‌ಲಾಕ್ ಹಾಕಲಾಗಿದ್ದು, ಇವುಗಳೆಲ್ಲ ಹೊಂಡಗಳಿAದ ಕೂಡಿ ಸಂಚಾರ ದುಸ್ತರವಾಗಿದೆ. ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.