ವಂದೇ ಮಾತರಂ ಗೀತೆಯನ್ನು ವಿರೋಧಿಸುವುದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದು-ಪಿ.ಕೆ. ಕೃಷ್ಣದಾಸ್

ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ  ಬೀಜ ಬಿತ್ತುವಂತದ್ದಾಗಿದೆಯೆಂದು   ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ    ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್  ತಿಳಿಸಿದ್ದಾರೆ. ಬಿಜೆಪಿ  ಜಿಲ್ಲಾ ಕಚೇರಿಯಲ್ಲಿ  ಇಂದು ಬೆಳಿಗ್ಗೆ ಅವರು ಪತ್ರಕರ್ತರೊಂದಿಗೆ  ಮಾತನಾಡುತ್ತಿದ್ದರು. ಭಾರತವನ್ನು ಇಬ್ಬಾಗವಾಗಿ ಹಾಗೂ ಹದಿನೇಳಾಗಿ ವಿಭಜಿಸಬೇಕೆಂದು ಆಗ್ರಹಿಸಿದ್ದ ಮುಸ್ಲಿಂ ಲೀಗ್ ಹಾಗೂ ಕಮ್ಯೂನಿಸ್ಟ್ ಪಕ್ಷಗಳು ವಂದೇ ಮಾತರಂನ್ನು ವಿರೋಧಿಸುವ ನಿಲುವು ತಳೆದಿರುವು …

ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25) ಸಾವನ್ನಪ್ಪಿದ ಯುವಕ. ಕೂಲಿ ಕಾರ್ಮಿಕನಾಗಿರುವ ವಿನಾಯಕ ಕೂಡ್ಲು ಗೋಪಾಲಕೃಷ್ಣ ದೇವಸ್ಥಾನ ಪರಿಸರದ ಖಾಸಗಿ ತೋಟದಲ್ಲಿ ರವಿವಾರ ಕೆಲಸಕ್ಕೆಂದು ಹೋಗಿದ್ದರು. ಅನಂತರ ಅವರು ಮನೆಗೆ ಹಿಂತಿರುಗಿರಲಿಲ್ಲ. ಆ ಬಗ್ಗೆ ಮನೆಯವರು ಕಾಸರಗೋಡು ಪೊಲೀಸರಿಗೂ ಮಾಹಿತಿ ನೀಡಿದ್ದರು. ಈ ಮಧ್ಯೆ ವಿನಾಯಕ ಕೆಲಸ ಮಾಡುತ್ತಿದ್ದ …

ವ್ಯಕ್ತಿ ಮನೆಯ ಸಿಟೌಟ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ:  ವ್ಯಕ್ತಿಯೊಬ್ಬರು ಮನೆಯ ಸಿಟೌಟ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಡಮನೆ ಬಳಿಯ ಮಾಡತ್ತಡ್ಕ ನಿವಾಸಿ ದಿ| ಗೋವಿಂದ ನಾಯ್ಕ-ಪರಮೇಶ್ವರಿ ದಂಪತಿಯ ಪುತ್ರ ನಾರಾಯಣ ನಾಯ್ಕ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಸಿಟೌಟ್‌ನಲ್ಲಿ ಇವರ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ  ವೇಳೆ ಮನೆಯಲ್ಲಿ ಇವರು ಮಾತ್ರವೇ ಇದ್ದರೆನ್ನಲಾಗುತ್ತಿದೆ. ಘಟನೆ ಬಗ್ಗೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ತಿರುಮಲೇಶ್ವರಿ, ಮಕ್ಕಳಾದ ಮಿಥುನ್‌ರಾಜ್, ಹರ್ಷಿತಾ,ಸಹೋದರಿ ಗೌರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವೆ ಸಹೋದರಿ ಲಕ್ಷ್ಮಿ …

ಮೊಬೈಲ್‌ಗೇಮ್ ಚಟ: ತಂದೆಯ ವಿರೋಧ ಹಿನ್ನೆಲೆಯಲ್ಲಿ ಕಾಶಿಗೆ ತೆರಳುವುದಾಗಿ ಪತ್ರ ಬರೆದಿಟ್ಟು ಮನೆ ತೊರೆದ ಬಾಲಕ

ಕಣ್ಣೂರು: ಮೊಬೈಲ್‌ಗೇಮ್  ಆಡುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನನೊಂದು 17ರ ಹರೆಯದ ಬಾಲಕ ಮನೆ ಬಿಟ್ಟು ತೆರಳಿದ್ದಾನೆ. ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾದ ವಿದ್ಯಾರ್ಥಿ. ಚೊಕ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತನಿಖೆ ಆರಂಭಿಸಲಾಗಿದೆ. ಆಗಸ್ಟ್ ೮ರಿಂದ ಬಾಲಕ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಮೊಬೈಲ್‌ಗೇಮ್ ಆಡುವುದು ನಿತ್ಯ ಹವ್ಯಾಸವನ್ನಾಗಿ ಮಾಡಿಕೊಂಡಿದ್ದ ಈತನಿಂದ ತಂದೆ ಫೋನ್ ಪಡೆದು ತೆಗೆದಿರಿಸಿದ್ದರು. ಆನ್‌ಲೈನ್ ಗೇಮ್‌ಗಳನ್ನು ಈತ ಖಾಯಂ ಆಗಿ ಆಡುತ್ತಿದ್ದನೆನ್ನಲಾಗಿದೆ. ಇದರಿಂದ ಮನೆಮಂದಿಗೆ ಹಲವು ಸಮಸ್ಯೆಗಳು ಸೃಷ್ಟಿಯಾಗಿತ್ತು. ಗೇಮ್ ಮೂಲಕ ಈತನಿಗೆ ತುಂಬಾ ಹಣ …

ಪ್ರತಿಭಟನೆ: ಬಿಜೆಪಿ ಜಿಲ್ಲಾಧ್ಯಕ್ಷೆ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು

ಕುಂಬಳೆ: ಕುಂಬಳೆ ಜಿಎಚ್‌ಎಸ್‌ಎಸ್‌ನಲ್ಲಿ ನಿನ್ನೆ ಶಿಕ್ಷಣ ಸಚಿವರ ಎನ್. ಶಂಸುದ್ದೀನ್ ಭಾಗವಹಿಸಿದ  ಕಾರ್ಯಕ್ರಮದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಸೇರಿದಂತೆ ಹತ್ತು ಮಂದಿ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಜಿಲ್ಲಾಧ್ಯಕ್ಷೆಯ ಹೊರತಾಗಿ ಬಿಜೆಪಿ ಇತರ ನೇತಾರರಾದ ಪಿ.ಆರ್. ಸುನಿಲ್, ಅಶ್ವಿನಿ, ಅಜಿ ಕುಮಾರ್, ಸಂದೀಪ್, ವಿಕ್ರಂ ಪೈ ಹಾಗೂ  ಇತರ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಚಿವರು ಭಾಗವಹಿಸಿದ ಈ ಕಾರ್ಯ ಕ್ರಮ ನಡೆಯುತ್ತಿದ್ದ ಶಾಲೆಯ ಪ್ರವೇಶದ್ವಾರದತ್ತ ಪ್ರತಿಭಟನಾ …

ನಗರದ ವಸತಿಗೃಹದಲ್ಲಿ ಪಾಲಕುನ್ನು ನಿವಾಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ನಗರದ ಬ್ಯಾಂಕ್ ರಸ್ತೆ ಬಳಿಯ  ವಸತಿಗೃಹವೊಂದರಲ್ಲಿ  ಕೊಠಡಿ ಪಡೆದುಕೊಂಡ ಪಾಲಕುನ್ನು ನಿವಾಸಿ ಸಾವನ್ನಪ್ಪಿದ ಸ್ಥಿತಿಯಲ್ಲಿ   ಪತ್ತೆಯಾಗಿದ್ದಾರೆ. ಪಾಲಕುನ್ನು ಕುರುಕನ್‌ಕುನ್ನು  ಕೋಟಪ್ಪಾರ ನಿವಾಸಿ  ಟಿ. ಬಾವ-ದೈನಾಬಿ ದಂಪತಿ ಪುತ್ರ ಹಮೀದ್ ಕೆ (52) ಮೃತಪಟ್ಟ ವ್ಯಕ್ತಿ. ಇವರು ಮೊನ್ನೆ ಈ ವಸತಿಗೃಹದ ಕೊಠಡಿ ಬಾಡಿಗೆಗೆ ಪಡೆದುಕೊಂಡಿದ್ದರು.  ಅವರು ಕೊಠಡಿಯಿಂದ ಹೊರಗೆ ಬಾರದಿರುವುದನ್ನು ಗಮನಿಸಿದ ವಸತಿಗೃಹದವರು  ಪರಿಶೀಲಿಸಿದಾಗ ಕೊಠಡಿಯೊಳಗೆ ಸಾವನ್ನಪ್ಪಿದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ವಿಷಯ ತಿಳಿದು ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹದ ಮಹಜರು ನಡೆಸಿದ ಬಳಿಕ ಅದನ್ನು ಜನರಲ್ …

ಎರಡು ತಿಂಗಳ ಹಿಂದೆ ಆತ್ಮಹತ್ಯೆಗೈದ ಯುವತಿಯ ಸಹೋದರ ಲಾಡ್ಜ್‌ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಸಹೋದರಿ ನೇಣುಬಿಗಿದು ಸಾವಿಗೆ ಶರಣಾದ ಎರಡು ತಿಂಗಳಲ್ಲೇ  ಸಹೋದರನೂ  ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಬೇಕಲ ಪಳ್ಳಿಕ್ಕರೆ ಮುಕ್ಕೂಡ್ ನಿವಾಸಿಯಾದ ಮಹೇಶ್ ಎಂಬವರ ಪುತ್ರ ಅರ್ಜುನ್ ಮಹೇಶ್ (24)ರ ಮೃತದೇಹ ನಿನ್ನೆ ಮಧ್ಯಾಹ್ನ ಮಂಗಳೂರಿನ ಲಾಡ್ಜ್‌ನಲ್ಲಿ  ಪತ್ತೆಯಾಗಿದೆ.  ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರ್ ಎಂಬಲ್ಲಿನ ಲಾಡ್ಜ್‌ನಲ್ಲಿ ಅರ್ಜುನ್ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.  ಅರ್ಜುನ್ ಮಹೇಶ್‌ರ ಸಹೋದರಿ ಐಜ ಆರ್ ಮಹೇಶ್ ಜೂನ್  ಮೊದಲ ವಾರ ಪಾಲಾದ ಹಾಸ್ಟೆಲ್‌ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಳು. ಕೂಡಲೇ …

ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ಯುವಕನೋರ್ವ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.  ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಬೈತ್ಯಡ್ಕ ಉನ್ನತಿಯ ನಿವಾಸಿಯಾದ ಬಾಬು ಎಂಬವರ ಪುತ್ರ ಹರೀಶ್ (22) ಮೃತ ಯುವಕ.  ಇವರು ಕೂಲಿ ಕಾರ್ಮಿಕನಾಗಿದ್ದರು. ಮೊನ್ನೆ ರಾತ್ರಿ ಮನೆ ಸಮೀಪದ ಮರದಲ್ಲಿ ಇವರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನೆ ಬಗ್ಗೆ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಹರೀಶ್‌ರ ತಾಯಿ ಸುಶೀಲ ಮೂರು ತಿಂಗಳ ಹಿಂದೆಯಷ್ಟೇ ಅಸೌಖ್ಯ ಬಾಧಿಸಿ …

ಕಲೆಕ್ಟ್ರೇಟ್‌ನ ಸೀನಿಯರ್ ಕ್ಲರ್ಕ್ ಸಾವು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ವರದಿ ಸಲ್ಲಿಸಲು ಎಡಿಎಂಗೆ ಜಿಲ್ಲಾಧಿಕಾರಿ ನಿರ್ದೇಶ

ಕಾಸರಗೋಡು: ಕಲೆಕ್ಟ್ರೇಟ್‌ನ ಸೀನಿಯರ್ ಕ್ಲರ್ಕ್ ಎ. ಆಶಾಲತಾರ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಎಡಿಎಂಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದ್ದಾರೆ. ಶುಕ್ರವಾರ ನೌಕರೆ 3 ಪ್ಯಾಕೆಟ್ ಇಲಿವಿಷ ಪೇಸ್ಟ್ ಐಸ್‌ಕ್ರೀಂನಲ್ಲಿ ಮಿಶ್ರಣ ಮಾಡಿ ಸೇವಿಸಿದ್ದರು. ತಾನು ಇಲಿವಿಷ ಸೇವಿಸಿರುವುದು ಮನೆ ಹಾಗೂ ಕಚೇರಿಯಲ್ಲಿ ಏಕಾಂಗಿಯಾಗಿದ್ದೇನೆಂಬ ಚಿಂತನೆಯಿಂದಿರುವ ಮೆಂಟಲ್ ಸ್ಟ್ರೆಸ್ ಕಾರಣದಿಂದಾಗಿ ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ನೊಂದಿರುವುದಾಗಿಯೂ ಇವರು ವಿದ್ಯಾನಗರ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತನಗೆ ಯಾರ ವಿರುದ್ಧವೂ ದೂರಿಲ್ಲವೆಂದು, ನಾನು  …

ಹಸಿರು ಕ್ರಿಯಾ ಸೇನೆ ಕಾರ್ಯಕರ್ತೆಯರು ಸಂಗ್ರಹಿಸಿದ  ತ್ಯಾಜ್ಯದೊಂದಿಗೆ 30 ಸಾವಿರ ರೂ., 2 ಪವನ್ ಚಿನ್ನ ಪತ್ತೆ

 ಕಾಸರಗೋಡು: ಪ್ಲಾಸ್ಟಿಕ್ ತ್ಯಾಜ್ಯಗಳ ಮಧ್ಯೆ ಹಸಿರು ಕ್ರಿಯಾ ಸೇನೆ ಕಾರ್ಯಕರ್ತರಿಗೆ ಎರಡು ಪವನ್ ಚಿನ್ನಾಭರಣ ಹಾಗೂ ೩೦ ಸಾವಿರ   ರೂಪಾಯಿಗಳು ಪತ್ತೆಯಾಗಿದ್ದು   ಅದನ್ನು ಕೂಡಲೇ  ವಾರಸುದಾರರಿಗೆ ಹಸ್ತಾಂತರಿಸಿ ಮಾದರಿಯಾದರು. ಪಳ್ಳಿಕ್ಕರೆ ಪಂಚಾಯತ್‌ನ 10 ಹಾಗೂ 11ನೇ ವಾರ್ಡ್‌ಗಳ ಹಸಿರು ಕ್ರಿಯಾ ಸೇನೆ ಕಾರ್ಯಕರ್ತರಾದ ಕಮಲ ಎನ್ ಹಾಗೂ ಮಮತ ಎಂಬಿವರು ಪ್ರಾಮಾಣಿಕತೆ ಮೆರೆದಿದ್ದಾರೆ. ಪೊಯಿನಾಚಿ ಪರಂಬ್‌ನ ಕೃಷ್ಣ ಎಂಬವರ ಮನೆಯಿಂದ ತ್ಯಾಜ್ಯ ಸಂಗ್ರಹಿಸುತ್ತಿದ್ದಾಗ  ಚಿನ್ನ ಹಾಗೂ ಹಣ ಪತ್ತೆಯಾಗಿದೆ.  ತ್ಯಾಜ್ಯವನ್ನು ಬೇರ್ಪಡಿಸುತ್ತಿದ್ದಾಗ  ಪ್ಲಾಸ್ಟಿಕ್ ಚೀಲವೊಂದರಲ್ಲಿ ಇವು ಕಂಡುಬಂದಿದೆ. …