ಯುವಕನನ್ನು ಪೊಲೀಸ್ ಠಾಣೆಯಿಂದ ಕರೆದೊಯ್ದು ಕೊಲೆಗೈದ ಪ್ರಕರಣ: ಗಲ್ಫ್ಗೆ ಪರಾರಿಯಾಗಿದ್ದ ಇನ್ನೋರ್ವ ಆರೋಪಿ ಬೆಂಗಳೂರು ವಿಮಾನ ನಿಲ್ದಾಣದಿಂದ ಸೆರೆ
ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಈ ವಿಷಯವನ್ನು ಬೆಂಗಳೂರು ವಿಮಾನ ನಿಲ್ದಾಣದ ಎಮಿಗ್ರೇಶನ್ ವಿಭಾಗದ ಅಧಿಕಾರಿಗಳು ತಿಳಿಸಿರುವುದಾಗಿ ಮಂಜೇಶ್ವರ ಪೊಲೀಸರು ಹೇಳಿದ್ದಾರೆ. ಮೀಯಪದವು ಬಳಿಯ ಮದಂಗಲ್ಲು ಎಂಬಲ್ಲಿನ ದಿ| ಅಬ್ದುಲ್ಲರ ಪುತ್ರ ಮೊಯ್ದೀನ್ ಆರಿಫ್ (22)ರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಅಬ್ದುಲ್ …