ರೈಲ್ವೇ ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿಗೆ ಹಲ್ಲೆ: ಆರೋಪಿ ಪೊಲೀಸ್ ಕಸ್ಟಡಿಯಲ್ಲಿ

ಉಪ್ಪಳ: ರೈಲ್ವೇ ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿಗೆ ಹಲ್ಲೆಗೈದು ಗಾಯಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೈದ ವ್ಯಕ್ತಿಯನ್ನು ಅಲ್ಲಿದ್ದ ಇತರರು ಸೆರೆ ಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕಳನಾಡು ಮೇಲ್ಪರಂಬ ಕೈನೋತ್ ನಿವಾಸಿ ಉಬೈದ್ (೫೨) ಎಂಬವರು ಹಲ್ಲೆ ಯಿಂದ ಗಾಯಗೊಂಡಿದ್ದಾರೆ. ಈ ಸಂಬಂಧ ಉಪ್ಪಳ ನಿವಾಸಿ ನಿಯಾಸ್ (೩೯) ಎಂಬಾತನನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ಘಟನೆ ನಡೆದಿದೆ. ಮಂಜೇಶ್ವರದಲ್ಲಿರುವ ಪತ್ನಿ ಮನೆಯಿಂದ ಮರಳಿದ ಉಬೈದ್ ಮಂಜೇಶ್ವರ ರೈಲ್ವೇ ನಿಲ್ದಾಣಕ್ಕೆ ತಲುಪಿ ಅಲ್ಲಿನ ಎರಡನೇ ಫ್ಲಾಟ್ ಫಾಂನಲ್ಲಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ತಲುಪಿದ ನಿಯಾಸ್  ವಿನಾ ಕಾರಣ ವಾಗ್ವಾದ ನಡೆಸಿ ಕಲ್ಲಿನಿಂದ ತಲೆಗೆ ಹೊಡೆದು ಗಂಭೀರ ಗಾಯ ಗೊಳಿಸಿದ್ದಾನೆನ್ನಲಾಗಿದೆ. ಕೂಡಲೇ ಅಲ್ಲಿದ್ದ ಪ್ರಯಾಣಿಕರು ಸೇರಿ ನಿಯಾಸ್‌ನನ್ನು ಹಿಡಿದು ಪೊಲೀ ಸರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಉಬೈದ್ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ನಿಯಾಸ್ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಉಬೈದ್   ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

RELATED NEWS

You cannot copy contents of this page