8.64 ಲೀಟರ್ ಕರ್ನಾಟಕ ಮದ್ಯ ಪತ್ತೆ
ಮಂಜೇಶ್ವರ: ಮಂಜೇಶ್ವರ ಅಬಕಾರಿ ತಪಾಸಣಾ ಕೇಂದ್ರದಲ್ಲಿ ಎಕ್ಸೈಸ್ ಇನ್ಸ್ಪೆಕ್ಟರ್ ಜಿನು ಜೇಮ್ಸ್ ಬಿ.ಯು ನೇತೃತ್ವದ ತಂಡ ನಿನ್ನೆ ವಾಹನ ತಪಾಸಣೆಯಲ್ಲಿ ತೊಡಗಿದಾಗ ಕರ್ನಾಟಕದಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸಿನೊಳಗೆ ವಾರಿಸುದಾರರಿಲ್ಲದ 8.64 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿದೆ. ಬಳಿಕ ಆ ಮಾಲನ್ನು ಕುಂಬಳೆ ರೇಂಜ್ ಅಬಕಾರಿ ಕಚೇರಿಗೆ ಹಸ್ತಾಂತರಿಸಲಾಗಿದೆ. ಈ ಕಾರ್ಯಾಚರಣೆ ನಡೆಸಿದ ಅಬಕಾರಿತಂಡದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ವಿ ಮತ್ತು ಸಿವಿಲ್ ಪೊಲೀಸ್ ಆಫೀಸರ್ ಸಜಿತ್ ಟಿ.ವಿ ಎಂಬವರು ಒಳಗೊಂಡಿದ್ದರು.