ಭಾರೀ ಪ್ರಮಾಣದ ಕರ್ನಾಟಕ ಮದ್ಯ ಪತ್ತೆ: ಓರ್ವ ಸೆರೆ, ಕಾರು ವಶ

ಕುಂಬಳೆ: ಬಂಬ್ರಾಣ ಮತ್ತು ಕಯ್ಯಾರಿನಲ್ಲಿ ಅಕ್ರಮ ಮದ್ಯ ಪತ್ತೆಗಾಗಿ ಅಬಕಾರಿ ತಂಡ ನಿನ್ನೆ ನಡೆಸಿದ ಎgಡು ಭಿನ್ನ ಕಾರ್ಯಾಚರಣೆಗಳಲ್ಲಾಗಿ ಭಾರೀ ಪ್ರಮಾಣದ ಕರ್ನಾಟಕ ನಿರ್ಮಿತ ಮದ್ಯ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಓರ್ವನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಕಾಸರಗೋಡು ಅಬಕಾರಿ ಉಪ ಆಯುಕ್ತರಿಗೆ ಲಭಿಸಿದ ಗುಪ್ತ ಮಾಹಿತಿಯಂತೆ ಅಬಕಾರಿ ಇಲಾಖಯ ಕುಂಬಳೆ ಸ್ಟ್ರೈಕಿಂಗ್ ಫೋರ್ಸ್  ಮತ್ತು ಕೆಮು ತಂಡ ನಿನ್ನೆ ಬಂಬ್ರಾಣ ಗ್ರಾಮದ ಕಟ್ಟತ್ತಡ್ಕದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಾರುತಿ ಕಾರೊಂದರಲ್ಲಿ ಸಾಗಿಸಲಾಗುತ್ತಿದ್ದ 129.6 ಲೀಟರ್ ಕರ್ನಾಟಕ ನಿರ್ಮಿತ ಮದ್ಯ,ವಿದೇಶ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಮಂಜೇಶ್ವರ ಕುಳೂರು ಗ್ರಾಮದ ಚಾರ್ಲ ನಿವಾಸಿ ಚಂದ್ರಶೇಖರ ಎಸ್ (38) ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಲು ಸಾಗಿಸಲು ಬಳಸಲಾದ  ಕಾರನ್ನು ಅಬಕಾರಿ ತಂಡ ವಶಪಡಿಸಿಕೊಂಡಿದೆ. ಕುಂಬಳೆ ಅಬಕಾರಿ ರೇಂಜ್ ಎಕ್ಸೈಸ್ ಇನ್‌ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ.

ಇದೇ ರೀತಿ ಕಾಸರಗೋಡು ಎಕ್ಸೈಸ್ ಐಬಿ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಶ್ರೀನಿವಾಸನ್ ಪಾತ್ತಿಲ್‌ಗೆ ಲಭಿಸಿದ ಗುಪ್ತ ಮಾಹಿತಿಯಂತೆ   ನಿನ್ನೆ ನಡೆಸಲಾದ ಕಾರ್ಯಾಚರಣೆಯಲ್ಲಿ ಮಂಗಲ್ಪಾಡಿ ಗ್ರಾಮದ ಕಯ್ಯಾರಿನಲ್ಲಿ ಹಿತ್ತಿಲೊಂದರಲ್ಲಿ ಬಚ್ಚಿಡಲಾಗಿದ್ದ ೧೫.೩ ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಕುಂಬಳೆ ಎಕ್ಸೈಸ್ ರೇಂಜ್ ಕಚೇರಿಯ ಎಕ್ಸೈಸ್ ಇನ್‌ಸ್ಪೆಕ್ಟರ್(ಗ್ರೇಡ್)  ಅನೀಶ್ ಕುಮಾರ್ ಎಂ  ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಪ್ರಸನ್ನ ಕುಮಾರ್.ವಿ, ರಂಜಿತ್ ಟಿ.ಕೆ ಮತ್ತು ಚಾಲಕ ಪ್ರವೀಣ್ ಎಂಬಿವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

Leave a Reply

Your email address will not be published. Required fields are marked *

You cannot copy content of this page