ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದಲ್ಲಿ 18ರಂದು ವಿಶೇಷ ಕಾರ್ಯಕ್ರಮ

ಉಡುಪಿ: ವಿಶ್ವಬ್ರಾಹ್ಮಣ ಸಮಾಜದ ಕುಲಗುರುಗಳಾದ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರ ಚಾತುರ್ಮಾಸ್ಯ ಮಹೋತ್ಸವದ ಅಂಗವಾಗಿ ಶ್ರೀ ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆಯ ಶ್ರೀ ಸರಸ್ವತೀ ಪೂರ್ವಛಾತ್ರ ಸಂಘ ಪಡುಕುತ್ಯಾರು ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಪಡುಕುತ್ಯಾರು ಆಶ್ರಯದಲ್ಲಿ ಆ. 18ರಂದು ವಿಶೇಷ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ೬ಕ್ಕೆ ಯೋಗ ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಹಲವರು ಗಣ್ಯರು ಉಪಸ್ಥಿತರಿರುವರು.

You cannot copy contents of this page