34 ಲೀಟರ್ ಕರ್ನಾಟಕ ಮದ್ಯ ವಶ: ಕಾರು ಸಹಿತ ಓರ್ವ ಸೆರೆ

ಕಾಸರಗೋಡು: ಚಟ್ಟಂಚಾಲ್‌ನಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾ ರ್ಯಾಚರಣೆಯಲ್ಲಿ ಕಾರಿನಲ್ಲಿ ಅಕ್ರ ಮವಾಗಿ ಸಾಗಿಸು ತ್ತಿದ್ದ 34.56 ಲೀ ಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಮೊಹಮ್ಮದ್ ಸಲ್ಫಾತ್ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಮಾಲು ಸಾಗಿಸಲು ಬಳಸಿದ ಕಾರನ್ನು ಅಬಕಾರಿ ತಂಡ ವಶಪಡಿಸಿಕೊಂಡಿದೆ. ಕಾಸರಗೋಡು ಎಕ್ಸೈಸ್ ಎನ್‌ಪೋರ್ಸ್‌ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಮುರಳಿ ಕೆ.ವಿ. ನೇತೃತ್ವದಲ್ಲಿ ಸಿಪಿಒಗಳಾದ ಕ್ರಿಸ್ಟಿನ್ ಪಿ.ಎ., ಸೋನು ಸೆಬಾಸ್ಟಿನ್, ಮಂಜುನಾಥನ್ ವಿ, ಸತೀಶನ್ ಕೆ, ನೌಶಾದ್ ಕೆ. ಮತ್ತು ಪ್ರಜಿತ್ ಕುಮಾರ್ ಕೆ.ಆರ್. ಎಂಬವರನ್ನೊಳಗೊಂಡ ಈ ಕಾರ್ಯಾಚರಣೆ ನಡೆಸಿದೆ.

You cannot copy contents of this page