ಆಸ್ಪತ್ರೆಗೆಂದು ಹೊರಟ ವ್ಯಕ್ತಿ ರೈಲುಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ಆಸ್ಪತ್ರೆಗೆ ತೆರಳುವುದಾಗಿ ತಿಳಿಸಿ ಮನೆಯಿಂದ ಹೊರಟ ವ್ಯಕ್ತಿ ರೈಲು ಹಳಿ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರೈಲಿನಿಂದ ಬಿದ್ದು ಮೃತಪಟ್ಟಿರಬಹುದೆಂದು ಸಂಶಯಿಸಲಾಗುತ್ತಿದೆ. ಕರ್ನಾ ಟಕದ ಸಕಲೇಶಪುರ ಬೆಳಕಾಡುವಿನ ರಾಜು (೭೫) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ ಮೊಗ್ರಾಲ್ ಸೇತುವೆ ಸಮೀಪ ರಾಜುವಿನ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ತಲುಪಿದ ಸಂಬಂಧಿಕರು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿದ್ದಾರೆ. ನಿನ್ನೆ ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿ ರಾಜು ಮನೆಯಿಂದ ಹೊರ ಟಿದ್ದರೆಂದೂ,  ಅಲ್ಲಿಂದ ಯಾಕಾಗಿ ಕಾಸರಗೋಡು ಭಾಗಕ್ಕೆ ರೈಲಿನಲ್ಲಿ ಪ್ರಯಣಿ ಸಿದ್ದಾರೆಂದು ತಿಳಿದು ಬಂದಿಲ್ಲವೆಂದು ಸಂಬಂಧಿಕರು ತಿಳಿಸಿದ್ದಾರೆ. ಮೃತರು ಪತ್ನಿ ಲಕ್ಷ್ಮಿ, ಮಕ್ಕಳಾದ ಕುಮಾರ್, ಮಂಜುಳ, ಸುಮತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಘಟನೆ ಬಗ್ಗೆ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಮೃತದೇಹವನ್ನು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ.

You cannot copy contents of this page