ಗಾಂಜಾ ವಶ : ಪ್ರಕರಣ ದಾಖಲು

ಕಾಸರಗೋಡು:  ಕಾಸರಗೋಡು ಎಕ್ಸೈಸ್ ಎನ್‌ಫೋರ್ಸ್‌ಮೆಂಟ್ ಆಂಡ್ ನಾರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್‌ನ ಹೆಚ್ಚುವರಿ ಹೊಣೆಗಾರಿಕೆ ಹೊಂದಿರುವ ಎಕ್ಸೈಸ್ ಇನ್‌ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದ ಅಬಕಾರಿ ತಂಡ ಬಿಲಾಲ್‌ನಗರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ೧೦ ಗ್ರಾಂ ಗಾಂಜಾ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ಬಿಲಾಲ್‌ನಗರದ ಕರೀಂ (49) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಸಿಸ್ಟೆಂಟ್  ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಸುರೇಶ್, ಸಿಕೆವಿ ಪ್ರಿವೆಂಟೀವ್ ಆಫೀಸರ್ ಅಜೇಶ್, ಸಿಇಒಗಳಾದ ರಾಜೇಶ್ ಅತುಲ್, ಮೈಮೋಳ್ ಜೋನ್, ಅಶ್ವತಿ ಮತ್ತು ಸಜೇಶ್ ಪಿ ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.

You cannot copy contents of this page