ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ ಮದ್ಯ ವಶ: ಓರ್ವ ಸೆರೆ
ಉಪ್ಪಳ: ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ 8.64 ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಡಂಬಾರ್ ವಿಲ್ಲೇಜ್ನ ಅಂಗಡಿಪದವು ನಿವಾಸಿ ಬಿ.ಎಂ ಅನಿಲ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ಇನ್ಸ್ಪೆಕ್ಟರ್ ಗಂಗಾಧರನ್ ಕೆ.ಪಿ, ಪ್ರಿವೆಂಟಿವ್ ಆಫೀಸರ್ಗಳಾದ ಸಾಜನ್ ಅಪ್ಯಾಲ್, ಎಂ.ಎಂ. ಪ್ರಸಾದ್, ಸಿವಿಲ್ ಎಕ್ಸೈಸ್ ಆಫೀಸರ್ ಪಿ.ವಿ. ಜಿತಿನ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.