ಮಧೂರು ಕ್ಷೇತ್ರಕ್ಕೆ ಶಿಲಾಮಯ ಮಹಾದ್ವಾರದ ಕೊಡುಗೆ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಉದ್ಯಮಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಕೂಳೂರು ಕನ್ಯಾನ ಇವರು ಶಿಲಾಮಯ ಮಹಾದ್ವಾರದ ನಿರ್ಮಾಣದ ಪ್ರಾಯೋಜಕತ್ವವನ್ನು ವಹಿಸಿದ್ದಾರೆ. ಇದಕ್ಕೆ ಒಂದು ಕೋಟಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಅವರು ಘೋಷಿಸಿದ್ದಾರೆ. ಇದರ ಹೊರತಾಗಿ ಅವರು ಈಗಾಗಲೇ ಶ್ರೀ ಕ್ಷೇತ್ರದ ರಾಜಾಂಗಣದ ಕಾಮಗಾರಿಗೆ ಎಪ್ಪತ್ತೈದು ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಇವರಿಗೆ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page