ಕುಂಜತ್ತೂರು: ಆಟೋ ಚಾಲಕನನ್ನು ಇರಿದು ಕೊಲೆಗೈಯ್ಯಲು ಬಳಸಿದ ಚಾಕು ಬಾವಿಯಲ್ಲಿ ಪತ್ತೆ

ಮಂಜೇಶ್ವರ: ಮಂಗಳೂರು ಮುಲ್ಕಿ ಬಳಿಯ ಕೊಲ್ನಾಡು ನಿವಾ ಸಿಯೂ ಮಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ ಮೊಹಮ್ಮದ್ ಶರೀಫ್ (52)  ಎಂಬವರನ್ನು ಕೊಲೆಗೈಯ್ಯಲು ಬಳಸಿದ ಚಾಕುವನ್ನು ಕುಂಜತ್ತೂರು ಬಳಿಯ ಅಡ್ಕಪ್ಪಳ್ಳ ಮಾನಿಗುಡ್ಡೆ ಎಂಬಲ್ಲಿನ ಬಾವಿಯಲ್ಲಿ ಪತ್ತೆಹಚ್ಚಲಾಗಿದೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೆರೆಗೀಡಾಗಿ ರಿಮಾಂ ಡ್‌ನಲ್ಲಿದ್ದ ಸುರತ್ಕಲ್ ಬಳಿಯ ಕಲ್ಲಾಪುವಿನ ಅಭಿಷೇಕ್ ಶೆಟ್ಟಿ (25)ಯನ್ನು ಪೊಲೀಸರು ಕಸ್ಟಡಿಗೆ ತೆಗೆದು ತನಿಖೆಗೊಳಪಡಿಸಿದಾಗ ಕೊಲೆಗೆ ಬಳಸಿದ ಚಾಕುವನ್ನು ಮಾನಿಗುಡ್ಡೆಯಲ್ಲಿರುವ ಬಾವಿಗೆ  ಎಸೆದಿರುವುದಾಗಿ ಹೇಳಿಕೆ ನೀಡಿದ್ದನು. ಈ ಹಿನ್ನೆಲೆಯಲ್ಲಿ ನಿನ್ನೆ ಉಪ್ಪಳ ಅಗ್ನಿಶಾಮಕದಳದ ಸಹಾಯದೊಂದಿಗೆ ನಡೆಸಿದ ತಪಾಸಣೆ ವೇಳೆ ಚಾಕು ಬಾವಿಯಲ್ಲಿ ಪತ್ತೆಯಾಗಿದೆ.

ಎಪ್ರಿಲ್ ೧೦ರಂದು ಇ. ಅನೂಪ್ ಕುಮಾರ್ ನೇತೃತ್ವದಲ್ಲಿ ನಡೆಸಿದ ತನಿಖೆಯಲ್ಲಿ ಆರೋಪಿ ಯನ್ನು ಬಂಧಿಸಲಾಗಿತ್ತು.

RELATED NEWS

You cannot copy contents of this page