ವಿವಿಧ ಕಡೆಗಳಲ್ಲಿ ಬಿಜೆಪಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ
ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿ ಆಶ್ರಯದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ ನಡೆಯಿತು. ಪಕ್ಷದ ರಾಜ್ಯ ಕೌನ್ಸಿಲ್ ಸದಸ್ಯ ವಿ. ರವೀಂದ್ರನ್ ಉದ್ಘಾಟಿಸಿದರು. ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ ಮಾತನಾಡಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಅನಂತಪುರ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ವಸಂತ ಮಯ್ಯ, ರಾಧಾಕೃಷ್ಣರೈ ಮಡ್ವ, ಉಪಾಧ್ಯಕ್ಷೆ ಪ್ರೇಮಾವತಿ, ಕಾರ್ಯದರ್ಶಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
ಪೆರ್ಲ: ಬಿಜೆಪಿ ಎಣ್ಮಕಜೆ ಪಂ. ಸಮಿತಿ ವತಿಯಿಂದ ನಡೆದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಮರಣೆಯನ್ನು ಜಿಲ್ಲಾ ಉಪಾಧ್ಯಕ್ಷ ಮುರಳೀಧರ ಯಾದವ್ ಉದ್ಘಾಟಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ. ಅನಿಲ್ ಕುಮಾರ್ ಮಾತನಾಡಿದರು. ಬ್ಲೋಕ್ ಪಂ. ಸದಸ್ಯ ಬಟ್ಟು ಶೆಟ್ಟಿ, ಪಂ. ಸದಸ್ಯರಾದ ಆಶಾಲತಾ, ಇಂದಿರಾ, ಮುಖಂಡರಾದ ಪುಷ್ಪಾ ಅಮೆಕ್ಕಳ, ಟಿ. ಪ್ರಸಾದ್, ಪದ್ಮಶೇಖರ್, ಶಿವರಾಮ, ಮಮತಾ ಯು. ರೈ, ನಾರಾಯಣ ಪ್ರಸಾದ್ ಕೂಟೇಲು, ಮಂಡಲ ಕಾರ್ಯದರ್ಶಿ ಸುಮಿತ್ರಾಜ್, ಉಷಾ ಗಣೇಶ್ ಭಾಗವಹಿಸಿದರು.
ಕುಂಬ್ಡಾಜೆ: ಕುಂಬ್ಡಾಜೆ ಪಂ. ಸಮಿತಿ ನೇತೃತ್ವದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನವನ್ನು ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯ ಎಂ. ಸಂಜೀವ ಮೊಟ್ಟೆಕುಂಜ ಉದ್ಘಾಟಿಸಿ ಮಾತನಾಡಿದರು. ಪಂಚಾಯತ್ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ ಅಧ್ಯಕ್ಷತೆ ವಹಿಸಿದರು. ಮಂಡಲ ಉಪಾಧ್ಯಕ್ಷೆ ನಳಿನಿಕೃಷ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಸುಧಾಮ ಗೋಸಾಡ, ಜಯಪ್ರಕಾಶ್ ರೈ, ರಘು ಮಾಚಾವು ಉಪಸ್ಥಿತರಿದ್ದರು.