ಕಾಸರಗೋಡು ನಿವಾಸಿ ರಾಜೇಶ್ ರೈ ಚಟ್ಲ ಸಹಿತ 53 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ
ಮಂಗಳೂರು: ಕಾಸರಗೋಡು ನಿವಾಸಿ, ಪ್ರಜಾವಾಣಿ ಪತ್ರಿಕೆಯ ವರದಿಗಾರ ರಾಜೇಶ್ ರೈ ಚಟ್ಲರಿಗೆ ಮಾಧ್ಯಮ ಕ್ಷೇತ್ರದಲ್ಲಿ ನಡೆಸಿದ ಸಾಧನೆಗಾಗಿ ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡರ 516ನೇ ಜಯಂತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 1 ಲಕ್ಷ ರೂ. ನಗದು ಹಾಗೂ ಫಲಕ ಪ್ರಶಸ್ತಿ ಒಳಗೊಂಡಿದೆ. ಇವರ ಜೊತೆಯಲ್ಲೇ ಇತರ ಹಲವರಿಗೂ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೇಶ್ ರೈ ಚಟ್ಲರಿಗೆ ಪ್ರಶಸ್ತಿ ಪ್ರದಾನ ಮಾಡಿದರು.