ಕಾಸರಗೋಡು ನಿವಾಸಿ ರಾಜೇಶ್ ರೈ ಚಟ್ಲ ಸಹಿತ 53 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಮಂಗಳೂರು: ಕಾಸರಗೋಡು ನಿವಾಸಿ, ಪ್ರಜಾವಾಣಿ ಪತ್ರಿಕೆಯ ವರದಿಗಾರ ರಾಜೇಶ್ ರೈ ಚಟ್ಲರಿಗೆ ಮಾಧ್ಯಮ ಕ್ಷೇತ್ರದಲ್ಲಿ ನಡೆಸಿದ ಸಾಧನೆಗಾಗಿ  ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡರ 516ನೇ ಜಯಂತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 1 ಲಕ್ಷ ರೂ. ನಗದು ಹಾಗೂ ಫಲಕ ಪ್ರಶಸ್ತಿ ಒಳಗೊಂಡಿದೆ. ಇವರ ಜೊತೆಯಲ್ಲೇ ಇತರ ಹಲವರಿಗೂ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೇಶ್ ರೈ ಚಟ್ಲರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Leave a Reply

Your email address will not be published. Required fields are marked *

You cannot copy content of this page