೨೫.೯೨ ಲೀಟರ್ ಕರ್ನಾಟಕ ಮದ್ಯ ಪತ್ತೆ: ಓರ್ವ ಸೆರೆ

ಕಾಸರಗೋಡು: ಕಾಸರಗೋಡು ಎಕ್ಸೈಸ್ ಎನ್‌ಪೋರ್ಸ್‌ಮೆಂಟ್ ಆಂಡ್ ಆಂಟಿ ನಾರ್ಕೋಟಿಕ್ ಸ್ಪೆಷಲ್ ಸೆಲ್ ಸ್ಕ್ವಾಡ್‌ನ ಪ್ರಿವೆಂಟೀವ್ ಆಫೀಸರ್ ಜೇಮ್ಸ್ ಅಬ್ರಹಾಂ ಕುರಿಯಾರ ನೇತೃತ್ವದ ತಂಡ ಕೂಡ್ಲು ರಾಮದಾಸನಗರದಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೨೫.೯೨ ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿ ಕೂಡ್ಲು ಗ್ರಾಮದ ಬೆದ್ರಡ್ಕ ಕಿನ್ನಿಗೋಳಿ ನಿವಾಸಿ ಸುರೇಶ್ ಬಿ.ಪಿ (೪೧) ಎಂಬಾತನ ನ್ನು ಬಂಧಿಸಿ  ಆತನ ವಿರುದ್ಧ ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ಮಾತ್ರವಲ್ಲ  ಆತ ಸಂಚರಿಸುತ್ತಿದ್ದ ಸ್ಕೂಟರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಅಬಕಾರಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪ್ರಜಿತ್ ಕೆ.ಆರ್, ನಸರುದ್ದೀನ್ ಎ.ಕೆ, ಮಹಿಳಾ ಸಿವಿಲ್ ಎಕ್ಸೈಸ್ ಆಫೀಸರ್ ಮೈಮೋಳ್ ಜೋನ್ ಎಂಬಿವರು ಒಳಗೊಂಡಿದ್ದರು.

You cannot copy contents of this page