ಮರ ಮುರಿದು ಬಿದ್ದು ಎರಡು ವಾಹನಗಳಿಗೆ ಹಾನಿ

ಉಪ್ಪಳ: ರಸ್ತೆ ಬದಿಯ ಮರ ಮುರಿದು ಬಿದ್ದು ಎರಡು ವಾಹನಗಳು ಹಾನಿಗೀಡಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹೊಸಂಗಡಿ-ಆನೆಕಲ್ಲು ರಸ್ತೆಯ ಹಲಸಿನಕಟ್ಟೆ ಎಂಬಲ್ಲಿನ ರಸ್ತೆ ಬದಿಯಲ್ಲಿರುವ ಮರದ ರೆಂಬೆ ಮುರಿದು ಬಿದ್ದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಪಿಕಪ್ ಹಾಗೂ ಸ್ಕೂಟರ್‌ನ ಮೇಲೆ ಮರದ ರೆಂಬೆ ಬಿದ್ದಿದ್ದು, ಪ್ರಯಾಣಿಕರು ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಅಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಎದುರಾಯಿತು.

You cannot copy contents of this page