ಮಂಜೇಶ್ವರ ಉಪಜಿಲ್ಲಾ ವಿಜ್ಞಾನ ಮೇಳ ಸಮಾರೋಪ

ವರ್ಕಾಡಿ: ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳದ ಸಮಾರೋಪ ಸಮಾರಂಭ ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗಿತು. ಕಾಸರಗೋಡು ಜಿಲ್ಲಾ ಪಂ ಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿ ಮಾತನಾಡಿದರು ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ್ಷೆ ಸಮೀನಾ ಟೀಚರ್ ಅಧ್ಯಕ್ಷತೆ ವಹಿಸಿದ್ದರು.
ಬ್ಲಾಕ್ ಪಂಚಾಯತ್ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಪಿ ಕೆ, ಬ್ಲಾಕ್ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್, ಬ್ಲಾಕ್ ಪಂಚಾಯತ್ ಸದಸ್ಯ ರಾಧಾಕೃಷ್ಣ ಕೆ ವಿ, ಡಾಕ್ಟರ್ ಮುರಳಿ ಪಿ ಎಸ್, ಪ್ರಸನ್ನ ಡಿಸೋಜ ಸಿಂತಾಜೆಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಜಾರ್ಜ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್, ಪ್ರಾಂಶುಪಾಲ ವಿಜಯಕುಮಾರ್, ಪ್ರಾಂಶುಪಾಲರ ವೇದಿಕೆಯ ಕಾರ್ಯದರ್ಶಿ ರಮೇಶ್ ಕೆ.ಎನ್, ಮುಖ್ಯೋಪಾಧ್ಯಾಯರ ವೇದಿಕೆಯ ಕಾರ್ಯದರ್ಶಿ ಶ್ಯಾಮ್ ಭಟ್, ವರ್ಕಾಡಿ ಪಂಚಾಯತ್ ಸದಸ್ಯರಾದ ಅಬ್ದುಲ್ ಲತೀಫ್ ಎಂ, ಶಿವರಾಜ್ ಕುಮಾರ್, ಶಾಲಾ ಪಿಟಿಎ ಅಧ್ಯಕ್ಷ ಅಬ್ದುಲ್ ಮಜೀದ್, ಉಪಾಧ್ಯಕ್ಷ ಮೋಹನ್ ಬಿ, ಲೋಹಿತ್ ಜೆ, ಎಂ ಪಿ ಟಿ ಎ ಅಧ್ಯಕ್ಷೆ ನಬಿಶಾ, ಹರ್ಷ ಕುಮಾರ ಪಾತೂರಾಯ, ಪಿಟಿಎ ಸದಸ್ಯ ಹಮೀದ್ ಕಣಿ ಯೂರು, ಅಬ್ದುಲ್ ಅಜೀಜ್, ಅಹಮದ್ ಕುಂಞÂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋ ಪಾಧ್ಯಾಯಿನಿ ಕೃಷ್ಣವೇಣಿ ಸ್ವಾಗತಿಸಿ,. ಮುಖ್ಯೋಪಾ ಧ್ಯಾಯರಾದ ಸುಬ್ರಹ್ಮಣ್ಯ ಭಟ್ ವಂದಿಸಿದರು. ವನಿತಾ ಟೀಚರ್, ಕಾರ್ತಿಕ್ ನಿರೂಪಿಸಿದರು.

RELATED NEWS

You cannot copy contents of this page