ಬದಿಯಡ್ಕ: ಶಬರಿಮಲೆಯ ಚಿನ್ನ ಕಳವು ವಿಚಾರದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರದ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ನಡೆಸುತ್ತಿರುವ ಮನೆ ಮನೆ ಸಂಪರ್ಕ ಅಭಿಯಾನದಂಗವಾಗಿ ಬದಿಯಡ್ಕ ಪಂಚಾಯತ್ ಮಾಜಿ ಅಧ್ಯಕ್ಷ ಸಾಯಿರಾಂ ಕೃಷ್ಣ ಭಟ್ರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಕೆ. ಪದ್ಮನಾಭನ್ ಭೇಟಿಯಾದರು. ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್, ಸುನಿಲ್, ಜಿಲ್ಲಾ ಉಪಾಧ್ಯಕ್ಷ ಡಿ.ಶೇಖರ, ಬದಿಯಡ್ಕ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ಬದಿಯಡ್ಕ ಪಶ್ಚಿಮ ವಲಯ ಅಧ್ಯಕ್ಷ ಮಹೇಶ್ ವಳಕ್ಕುಂಜ ಸೇರಿದಂತೆ ಬಿಜೆಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಜೊತೆಯಲ್ಲಿದ್ದರು.
