ಅಬಕಾರಿ ಕಾರ್ಯಾಚರಣೆ: ಮನೆ, ಕಾರಿನಲ್ಲಿ ಬಚ್ಚಿಟ್ಟಿದ್ದ 11 ಕಿಲೋ ಗಾಂಜಾ ಪತ್ತೆ; ಓರ್ವ ಸೆರೆ, ಬಂಧಿತನು ಈ ಹಿಂದೆ ಬೇರೊಂದು ಪ್ರಕರಣದಲ್ಲೂ ಸೆರೆಗೊಳಗಾಗಿ ಜೈಲುವಾಸ ಅನುಭವಿಸಿದ್ದ

ಮಂಜೇಶ್ವರ: ಕುಬಣೂರುನಲ್ಲಿ ಕಾಸರಗೋಡು ಎಕ್ಸೈಸ್ ಆಂಡ್ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಇನ್ಸ್ಪೆಕ್ಟರ್ ವಿಷ್ಣುಪ್ರಕಾಶ್ರ ನೇತೃತ್ವದ ತಂಡ ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಮತ್ತು ಕಾರಿನಲ್ಲಿ ಬಚ್ಚಿಟ್ಟಿದ್ದ ಒಟ್ಟು 11.769 ಕಿಲೋ ಗಾಂಜಾ ಪತ್ತೆ ಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬAಧಿಸಿ ಕುಬಣೂರು ಕಾಡಮೂಲೆ ನಿವಾಸಿ ಮೊದೀನ್ ಶಬೀರ್ (36) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಅಬಕಾರಿ ತಂಡ ನಿನ್ನೆ ಸಂಜೆ ಸುಮಾರು 7.10ರ ವೇಳೆಗೆ ಆರೋಪಿಯ ಮನೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಲಗುವ ಕೊಠಡಿಯ ಹಾಸಿಗೆಯ ಅಡಿಭಾಗದಲ್ಲಿ ಬಚ್ಚಿಟ್ಟಿದ್ದ 5.269 ಕಿಲೋ ಗ್ರಾಂ ಮತ್ತು ಆ ಮನೆಯ ಎದುರುಗಡೆ ನಿಲ್ಲಿಸಿದ್ದ ಟಾಟಾ ನಾನೋ ಕಾರಿನಿಂದ 6.5 ಕಿಲೋ ಸೇರಿದಂತೆ ಒಟ್ಟು 11.769 ಕಿಲೋ ಗಾಂಜಾ ಪತ್ತೆಹಚ್ಚಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಆ ಕಾರನ್ನೂ ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಈ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗ್ರೇಡ್ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸನ್ ಪಾತಿಲ್, ಸಿ.ಕೆ.ವಿ. ಸುರೇಶ್, ಗ್ರೇಡ್ ಪ್ರಿವೆಂಟಿವ್ ಆಫೀಸರ್ ಗಳಾದ ಅಜೀಶ್ ಸಿ, ಪ್ರಜಿತ್ ಕೆ.ಆರ್, ಸಿವಿಲ್ ಎಕ್ಸೈಸ್ ಆಫೀಸರ್ ಗಳಾದ ಸೋನು ಸೆಬಾಸ್ಟಿಯನ್, ಶಿಜಿತ್ ವಿ.ವಿ, ಧನ್ಯ ಟಿ.ವಿ. ಎಂಬವರು ಒಳಗೊಂಡಿದ್ದರು. ಬೇರೊಂದು ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬAಧಿಸಿ ಆರೋಪಿಯನ್ನು ಈ ಹಿಂದೆಯೂ ಬಂಧಿಸ ಲಾಗಿತ್ತೆಂದೂ, ಬಳಿಕ ಆತ ಜೈಲುವಾಸ ಅನುಭವಿ ಸಿದ್ದನೆಂದೂ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

RELATED NEWS

You cannot copy contents of this page