ಹೊಯ್ಗೆ ಸಾಗಿಸುತ್ತಿದ್ದ ಆಟೋ ರಿಕ್ಷಾ ವಶ

ಉಪ್ಪಳ: ಆಟೋ ರಿಕ್ಷಾದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಬೆಳಿಗ್ಗೆ ಹೊಸಂಗಡಿ ಭಾಗದಲ್ಲಿ ಎಸ್.ಐ ವೈಷ್ಣವ್ ರಾಮಚಂದ್ರನ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೊಯ್ಗೆ ತುಂಬಿಸಿದ ಆಟೋ ರಿಕ್ಷಾ ತಲುಪಿದೆ.  ಯಾವುದೋ ಹೊಳೆಯಿಂದ ಸಂಗ್ರಹಿಸಿದ ಹೊಯ್ಗೆಯನ್ನು ೧೦ ಗೋಣಿಚೀಲಗಳಲ್ಲಿ ತುಂಬಿಸಿ ರಿಕ್ಷಾದಲ್ಲಿ ಸಾಗಿಸಲಾಗುತ್ತಿತ್ತು. ಈ ಸಂಬಂಧ ರಿಕ್ಷಾವನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಚಾಲಕ ಮಂಜೇಶ್ವರ ಕಡಪ್ಪುರ ಜಾರ ನಿವಾಸಿ ಆಶಿಫ್ (36) ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

RELATED NEWS

You cannot copy contents of this page