ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ೩ನೇ ದಿನ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಯೋಗಾ ನಂದ ಸರಸ್ವತೀ ಸ್ವಾಮೀಜಿ ಕೊಂಡೆವೂರು ಇವರು ಆಶೀರ್ವಚನ ನೀಡಿ, ಸನಾತನ ಸಂಸ್ಕೃತಿಯ ಕೇಂದ್ರ ಬಿಂದು ಧಾರ್ಮಿಕ ಕೇಂದ್ರಗಳು. ಒಂದು ದೇವಸ್ಥಾನವು ಆ ಗ್ರಾಮದ ಅಳತೆಗೋಲು ಎಂದರೆ ತಪ್ಪಾಗಲಾ ರದು. ಅಂತಃಕರಣ ಶುದ್ಧವಾಗಿದ್ದರೆ ಲೋಕವನ್ನು ನೋಡುವ ದೃಷ್ಟಿ ಬದಲಾಗುತ್ತದೆ. ಪ್ರಾಚೀನ ಗ್ರಂಥಗಳು ನಮ್ಮ ಜೀವನಕ್ಕೆ ಅದೆಷ್ಟೋ ಒಳ್ಳೆಯ ಸಂದೇಶಗಳನ್ನು ನೀಡಿದೆ. ನಮ್ಮಲ್ಲಿರುವ ಒಳ್ಳೆಯತನ, ಉತ್ತಮ ಭಾವವನ್ನು ಜಾಗೃತಗೊಳಿಸಬೇಕು. ದೇವರು ಬಿಂಬವಾದರೆ ನಾವು ದೇವರ ಪ್ರತಿಬಿಂಬ ಎಂಬುದು ಎಲ್ಲಾ ಭಕ್ತರ ಮನದಲ್ಲಿರಬೇಕು ಎಂದರು.
ದೈವ ನರ್ತಕ ಡಾ. ರವೀಶ ಪರವ ಪಡುಮಲೆ ಧಾರ್ಮಿಕ ಭಾಷಣ ಮಾಡಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಪುತ್ತೂರು ಮುಖ್ಯ ಅಭ್ಯಾಗತರಾಗಿ ಪಾಲ್ಗೊಂಡರು.
ಭಾರತ ಸರಕಾರದ ಹುಡ್ಕೋ ಮಾಜಿ ಕಾರ್ಯನಿರ್ವಹಣಾದಿsಕಾರಿ ರವೀಂದ್ರ ಆಳ್ವ ಕೋಟೆಕುಂಜ, ಡಾ| ನಾಗರಾಜ ಭಟ್ ಚೇತನಡ್ಕ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ರಕ್ಷಾದಿsಕಾರಿ ಯೋಗೀಶ ಕಡಮಣ್ಣಾಯ ಆರಿಕ್ಕಾಡಿ, ಕಾಟಿಪಳ್ಳ ಸುಬ್ರಹ್ಮಣ್ಯ ಭಟ್, ಮಲಬಾರ್ ದೇವಸ್ವಂ ಬೋರ್ಡ್ನ ಎ.ಕೆ.ಶಂಕರ್, ಡಾ| ಎಂ. ಮನೋಹರ್ ಮುಳ್ಳೇರಿಯ, ಪ್ರಗತಿಪರ ಕೃಷಿಕ ಶಂಕರನಾರಾಯಣ ಭಟ್ ಪೆರುಮುಂಡ, ಉದ್ಯಮಿ ಜಯಪ್ರಸಾದ್ ರೈ ಕಾರಿಂಜ, ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ನಾರಾಯಣ ಕಾಟುಕುಕ್ಕೆ, ಹಿರಿಯರಾದ ಪ್ರಭಾಕರ ಕಲ್ಲೂರಾಯ ಬನದಗದ್ದೆ ಗೌರವ ಉಪಸ್ಥಿತರಿದ್ದರು. ಸುಬ್ರಾಯ ಭಟ್ ಪುದ್ಯೋಡು, ಕೃಷ್ಣ ಪ್ರಸಾದ ರೈ ಪೆರಡಾಲ, ಸೂರ್ಯನಾರಾಯಣ ಬಿ., ಶಿವರಾಮ ಭಟ್ ಪೆರ್ಮುಖ, ಶಿವಪ್ರಕಾಶ್ ಎಂ., ಮಂಜುನಾಥ ಆಳ್ವ ಮಡ್ವ, ಬಿ.ನಾರಾಯಣ, ಜಯರಾಮ ಪೊನ್ನಂಗಳ, ಸದಾಶಿವ ಪೆರಡಾಲ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಸ್ವಾಗತಿಸಿ, ಅನಂತ ಕುಮಾರ್ ಬರ್ಲ ವಂದಿಸಿದರು. ಪ್ರೊ. ಎ. ಶ್ರೀನಾಥ್ ನಿರೂಪಿಸಿದರು.







