ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಕೇಂದ್ರವಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ದಿ| ಕೆ.ಜಿ. ಮಾರಾರ್ ಸ್ಮೃತಿ ದಿನ ಆಚರಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಶೈನಿ, ಮಹಿಳಾ ಮೋರ್ಛಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯಕ್ ಸಹಿತ ಹಿರಿಯ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಿದರು







