ಎಡನೀರು ಮಠದಲ್ಲಿ ಮಹಾ ಶ್ರೀಚಕ್ರ ನವಾವರಣ ಪೂಜೆ

ಎಡನೀರು: ಎಡನೀರು ಮಠದಲ್ಲಿ ನಿನ್ನೆ ಅಪರಾಹ್ನ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರ ಉಪಸ್ಥಿತಿ ಯಲ್ಲಿ ಬ್ರಹ್ಮಶ್ರೀ ಮುಲ್ಲಪ್ಪಳ್ಳಿ ಕೃಷ್ಣನ್ ನಂಬೂದಿರಿಯವರಿಂದ ಮಹಾ ಶ್ರೀಚಕ್ರ ನವಾವರಣ ಪೂಜೆ ಜರಗಿತು. ಈ ವೇಳೆ ವಿದುಷಿ ಎನ್.ಜೆ. ನಂದಿನಿ ಮತ್ತು ಬಳಗದವರಿಂದ ನವಾವರಣ ಕೃತಿ ಆಲಾಪನೆ ಜರಗಿತು. ವಯಲಿನ್‌ನಲ್ಲಿ ವಿದ್ವಾನ್ ವಿಠಲರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ಆನೂರು ಅನಂತಕೃಷ್ಣ ಶರ್ಮ ಬೆಂಗಳೂರು, ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ್ ಸಹಕರಿಸಿದರು.

You cannot copy contents of this page