ವೈಭವದಿಂದ ಸಮಾಪ್ತಿಗೊಂಡ ಕಾಳ್ಯಂಗಾಡು ಬ್ರಹ್ಮಕಲಶೋತ್ಸವ

ಕೂಡ್ಲು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಾಪ್ತಿಗೊಂಡಿತು. ಗಣಪತಿಹೋಮ, ಕವಾಟೋದ್ಘಾಟನೆ, ಮಹಾಪೂಜೆ ನಡೆಯಿತು. ತಂತ್ರಿ ಶ್ರೀಕೃಷ್ಣ ಗುರೂಜಿ ಕುಕ್ಕಾಜೆ ನೇತೃತ್ವ ವಹಿಸಿದರು. ಮೊಕ್ತೇಸರ ಅಚ್ಯುತ ಕಾಳ್ಯಂಗಾಡು, ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಸಲಹಾ ಸಮಿತಿಯ ರಘು ಮೀಪುಗುರಿ, ಭಾಸ್ಕರ ಕಾಳ್ಯಂಗಾಡು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಕಾರ್ಯದರ್ಶಿಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ನಾಯ್ಕ್ ಕಾಳ್ಯಂಗಾಡು, ಕೋಶಾಧಿಕಾರಿ ಶಾಂತ ಕುಮಾರ್ ಮುಂಡ್ಯತ್ತಡ್ಕ, ಜೊತೆ ಕೋಶಾಧಿಕಾರಿ ಪುನಿತ್ ಕೆಮ್ಮಣ್ಣು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್, ಮಾತೃಸಮಿತಿ ಮತ್ತು ಇತರ ಸಮಿತಿಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಿದರು. ವಿವಿಧ ತಂಡಗಳಿಂದ ಭಜನೆ ನಡೆಯಿತು.

You cannot copy contents of this page