ಬಾಯಾರು: ಮುಳಿಗದ್ದೆ ಗಣೇಶಗಿರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಣೇಶ ಮಂದಿರದ ಲೋಕಾರ್ಪಣೆ ಮತ್ತು 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರÀವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನೆರವೇರಿಸಿದರು. ಬಳಿಕ ಆಶೀರ್ವಚನ ನೀಡಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಊರಿನ ಗಣ್ಯರು, ಭಕ್ತಾಧಿಗಳು, ಸಮಿತಿಯ ಮಾಜಿ ಮತ್ತು ಹಾಲಿ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾಯಾರು ಮುಳಿಗದ್ದೆ ಇದರ ವತಿಯಿಂದ ಧನ್ಯವಾದ ಅರ್ಪಿಸಲಾಯಿತು.






