ವಿದ್ಯಾರ್ಥಿ ನಾಪತ್ತೆ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್‌ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್‌ನ ಮೊಯ್ದೀನ್ ಎಂಬವರ ಪುತ್ರ ಮೊಹಮ್ಮದ್ ಮುಸಾಮಿಲ್ (17)  ಎಂಬಾತ ನಾಪತ್ತೆಯಾದ ವಿದ್ಯಾರ್ಥಿ.  ನಿನ್ನೆ ಮಧ್ಯಾಹ್ನದಿಂದ ಈತ ಶಿಕ್ಷಣ ಸಂಸ್ಥೆಯಿಂದ ನಾಪತ್ತೆಯಾಗಿರು ವುದಾಗಿ  ಶಿಕ್ಷಣ ಸಂಸ್ಥೆ ಅಧ್ಯಾಪಕ ಅಬ್ದುಲ್ ಲತೀಫ್ ಎಂಬವರು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

You cannot copy contents of this page