ಕರ್ನಾಟಕ ಮದ್ಯ ಮಾರಾಟಕ್ಕೆ  ಯತ್ನಿಸಿದ  ವ್ಯಕ್ತಿ ಸೆರೆ

ಕುಂಬಳೆ: ಕುಂಬಳೆ ಪೇಟೆಯಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ತಲುಪಿದ ವ್ಯಕ್ತಿ ಸೆರೆಗೀಡಾಗಿದ್ದಾನೆ. ಉಳ್ಳಾಲ ನಿವಾಸಿಯಾದ  ನವೀನ್ ಕುಮಾರ್ (59) ಎಂಬಾತನನ್ನು ಕುಂಬಳೆ ರೇಂಜ್ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಎ.ಬಿ. ಅಬ್ದುಲ್ಲ, ಸಿವಿಲ್ ಎಕ್ಸೈಸ್ ಆಫೀಸರ್ ಟಿ. ಕಣ್ಣನ್ ಕುಂಞಿ ನೇತೃತ್ವದಲ್ಲಿ ಬಂಧಿಸಲಾಗಿದೆ. ಬಂಧಿತನ ಕೈಯಿಂದ ೪.೧೪ ಲೀಟರ್  ಕರ್ನಾಟಕ ಮದ್ಯವನ್ನು ವಶಪಡಿಸಲಾಗಿದೆ. ನಿನ್ನೆ ಬೆಳಿಗ್ಗೆ ಕಂಚಿಕಟ್ಟೆಗೆ ತೆರಳುವ ರಸ್ತೆಯಲ್ಲಿ  ನಿಂತಿದ್ದ  ನವೀನ್‌ಕುಮಾರ್‌ನನ್ನು ಅಬಕಾರಿ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚೀಲದಲ್ಲಿ ಮದ್ಯ ಪತ್ತೆಯಾಗಿದೆ.

You cannot copy contents of this page