ಮಜಿಬೈಲ್‌ನಲ್ಲಿ ಬಿ.ವಿ. ರಾಜನ್ ಸಂಸ್ಮರಣೆ

ಮಂಜೇಶ್ವರ: ಸಿಪಿಐ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಬಿ.ವಿ ರಾಜನ್ ಸಂಸ್ಮರಣಾ ಸಮ್ಮೇಳನವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಿನ್ನೆ ನಡೆಯಿತು. ಮಂಡಲ ಕಾರ್ಯದರ್ಶಿ ಜಯರಾಮ ಬಲ್ಲಂಗುಡೇಲ್ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಹ ಕಾರ್ಯದರ್ಶಿ, ಶಾಸಕ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಜಿಲ್ಲಾ ಕಾರ್ಯದರ್ಶಿ ಸಿ.ಪಿ ಬಾಬು, ರಾಜ್ಯ ಸಮಿತಿ ಸದಸ್ಯ ಟಿ.ಕೃಷ್ಣನ್, ಗೋವಿಂದನ್ ಪಳ್ಳಿಕಾಪ್ಪಿಲ್, ಜಿಲ್ಲಾ ಸಮಿತಿ ಸದಸ್ಯ ರಾಮಕೃಷ್ಣ ಕಡಂಬಾರ್, ಅಜಿತ್ ಎಂ.ಸಿ ಲಾಲ್ ಬಾಗ್ ಮೊದಲಾದವರು ಮಾತನಾಡಿದರು. ಜಿಲ್ಲಾ ಸಮಿತಿ ಸದಸ್ಯ ರಾಮಚಂದ್ರ ಬಡಾಜೆ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *

You cannot copy content of this page